ಬೆಂಗಳೂರು:ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆಯ ಮುಂಭಾಗದ ಹೆಚ್.ಬಿ.ಕಲ್ಯಾಣ ಮಂಟಪದ ಬಳಿಯ ಚರಂಡಿ ದುರಸ್ತಿ ವೇಳೆ ಬಿಬಿಎಂಪಿ ಸಿಬ್ಬಂದಿಗೆ ಶವವೊಂದು ಪತ್ತೆಯಾಗಿದ್ದು, ವಿಜಯನಗರ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲಿಸಿದ್ದಾರೆ.
ಚರಂಡಿಯಲ್ಲಿ ಹಲವು ದಿನಗಳಿಂದ ಸರಾಗವಾಗಿ ನೀರು ಹೋಗುತ್ತಿರಲಿಲ್ಲ. ಇದರಿಂದ ಸುತ್ತಮುತ್ತಲಿನ ಪ್ರದೇಶ ವಾಸನೆಯಿಂದ ಕೂಡಿತ್ತು. ಈ ಸಂಬಂಧ ಬಿಬಿಎಂಪಿ ಸಿಬ್ಬಂದಿ ಚರಂಡಿಯಲ್ಲಿ ಹೂಳು ತೆಗೆಯಲು ಮೋರಿಯ ಛಾವಣಿ ತೆಗೆಯಲು ಮುಂದಾಗುತ್ತಿದ್ದಂತೆ ಶವದ ಕಳೇಬರ ಕಂಡು ಆತಂಕಕ್ಕೆ ಒಳಗಾಗಿದ್ದಾರೆ.