ಕರ್ನಾಟಕ

karnataka

ETV Bharat / state

ಮೈತ್ರಿ ಸರ್ಕಾರಕ್ಕೆ ಸೋಲು..  ಜೆಡಿಎಸ್ ನಾಯಕರ ಮಹತ್ವದ ಚರ್ಚೆ - Jds

ವಿಶ್ವಾಸಮತದಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲುಂಟಾದ ಹಿನ್ನಲೆ, ಪಕ್ಷದ ಬಲವರ್ಧನೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್​ ಮುಖಂಡರ ಮಹತ್ವದ ಸಭೆ ನಡೆಯುತ್ತಿದೆ.

ಮೈತ್ರಿ ಸರ್ಕಾರಕ್ಕೆ ಸೋಲು..ಜೆಡಿಎಸ್ ನಾಯಕರ ಮಹತ್ವದ ಚರ್ಚೆ

By

Published : Jul 24, 2019, 1:10 PM IST

ಬೆಂಗಳೂರು:ವಿಶ್ವಾಸಮತದಲ್ಲಿ ಮೈತ್ರಿ ಸರ್ಕಾರಕ್ಕೆ ಸೋಲುಂಟಾದ ಹಿನ್ನಲೆಯಲ್ಲಿ ಪಕ್ಷದ ಬಲವರ್ಧನೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಜೆಡಿಎಸ್​ ಮುಖಂಡರ ಸಭೆ ನಡೆಯುತ್ತಿದೆ.

ಮೈತ್ರಿ ಸರ್ಕಾರಕ್ಕೆ ಸೋಲು..ಜೆಡಿಎಸ್ ನಾಯಕರ ಮಹತ್ವದ ಚರ್ಚೆ

ಜೆ.ಪಿ.ಭವನದಲ್ಲಿರುವ ಜೆಡಿಎಸ್​ ಕಚೇರಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ನಿರ್ಗಮಿತ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಹೆಚ್.ಡಿ.ರೇವಣ್ಣ, ಸಿ.ಎಸ್.ಪುಟ್ಟರಾಜು, ವೆಂಕಟರಾವ್ ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದಾರೆ. ನಿನ್ನೆ ವಿಶ್ವಾಸ ಮತದಲ್ಲಿ ಸೋಲಾದ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಮುಂದಿನ ನಡೆ, ಅತೃಪ್ತ ಶಾಸಕರ ವಿರುದ್ಧ ಯಾವ ರೀತಿಯ ಅಸ್ತ್ರ ಬಳಸಬಹುದು. ಪಕ್ಷದಿಂದ ಯಾವ ರೀತಿಯ ಕ್ರಮಕ್ಕೆ ಮುಂದಾಗಬಹುದು ಎಂಬ ಕುರಿತು ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ.

ಈಗಿನ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರೆಸಬೇಕೆ? ಅಥವಾ ಬೇಡವೇ?, ಉಪ ಚುನಾವಣೆಯಲ್ಲಿ ಮೈತ್ರಿ ಮುಂದುವರೆಸುವ ಕುರಿತು ಜೆಡಿಎಸ್ ನಾಯಕರು ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದಾರೆ ಎನ್ನಲಾಗಿದೆ.

For All Latest Updates

TAGGED:

Jds

ABOUT THE AUTHOR

...view details