ಕರ್ನಾಟಕ

karnataka

ಡಿನೋಟಿಫಿಕೇಷನ್ ಪ್ರಕರಣ: 'ಸುಪ್ರೀಂ'ನಲ್ಲಿಂದು ಸಿಎಂ ಬಿಎಸ್​ವೈ ಮೇಲ್ಮನವಿ ವಿಚಾರಣೆ

By

Published : Jan 27, 2021, 3:09 AM IST

ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್‌ ನೀಡಿರುವ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್‌ ನಿರಾಣಿ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ ನಡೆಯಲಿದೆ.

denotification-case-cm-b-s-yediyurappas-plea-hearing-in-supreme-court-today
ಬಿಎಸ್​ವೈ ಮೇಲ್ಮನವಿ ವಿಚಾರಣೆ

ನವದೆಹಲಿ/ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಹೈಕೋರ್ಟ್‌ ನೀಡಿರುವ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್‌ ನಿರಾಣಿ ಅವರು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ಇಂದು ನಡೆಯಲಿದೆ.

2010-11ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ ನಂತರ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿ ಆ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಅವರು ತಮ್ಮಿಂದ ಹಿಂದಕ್ಕೆ ಪಡೆದಿದ್ದಾರೆ ಎಂದು ಉದ್ಯಮಿ ಎ.ಅಲಂ ಪಾಷಾ ಅವರು ಆರೋಪ ಮಾಡಿದ್ದರು. ಈ ಸಂಬಂಧ ಅವರು ಲೋಕಾಯುಕ್ತಕ್ಕೆ ಖಾಸಗಿ ದೂರು ದಾಖಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ಹಾಗೂ ವಿಶೇಷ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿ.ಎಸ್. ಯಡಿಯೂರಪ್ಪ 2019ರಲ್ಲಿ ಹೈಕೋರ್ಟ್​​​​ಗೆ ಅರ್ಜಿ ಸಲ್ಲಿಸಿದ್ದರು‌. ಜನವರಿ 5ರಂದು ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಜಾಗೊಳಿಸಿ, ವಿಚಾರಣೆ ನಡೆಸುವಂತೆ ಆದೇಶಿಸಿತ್ತು.

ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ಹಾಗೂ ನ್ಯಾಯಮೂರ್ತಿಗಳಾದ ಎ.ಎಸ್‌. ಬೋಪಣ್ಣ ಹಾಗೂ ವಿ.ರಾಮಸುಬ್ರಮಣಿಯಮ್‌ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಇವರು ಸಲ್ಲಿಸಿರುವ ಪ್ರತ್ಯೇಕ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಲಿದೆ.

ABOUT THE AUTHOR

...view details