ಕರ್ನಾಟಕ

karnataka

ETV Bharat / state

ಕರ್ನಾಟಕ ಚುನಾವಣೆ: 3 ಪಟ್ಟು ಹೆಚ್ಚು ಮಿಲಿಟರಿ ಪಡೆ ನಿಯೋಜನೆ - kannada news

ಚುನಾವಣೆ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜ್ಯ ಪೊಲೀಸರೊಂದಿಗೆ ಕೇಂದ್ರ ಅರೆಸೇನಾ ಹಾಗೂ ಪ್ಯಾರಾಮಿಲಿಟರಿ ಫೋರ್ಸ್​ ಕಾರ್ಯನಿರ್ವಹಿಸಲಿವೆ.

deployment-of-three-times-more-military-forces-compared-to-last-time
ರಾಜ್ಯ ಚುನಾವಣೆ ಹಿನ್ನೆಲೆ: ಕಳೆದ‌ ಬಾರಿಗೆ ಹೋಲಿಸಿದರೆ ಮೂರು ಪಟ್ಟು ಅಧಿಕ ಮಿಲಿಟರಿ ಪೋರ್ಸ್​ಗಳ ನಿಯೋಜನೆ

By

Published : Apr 16, 2023, 10:30 PM IST

ಬೆಂಗಳೂರು:ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೊಂದು ತಿಂಗಳಷ್ಟೇ ಬಾಕಿ ಇದೆ. ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶಾಂತಿಯುತ ಚುನಾವಣೆ‌ ನಡೆಸಲು ರಾಜ್ಯ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಕಳೆದ ಬಾರಿ ಹೋಲಿಸಿದರೆ ಸ್ಥಳೀಯ ಪೊಲೀಸರೊಂದಿಗೆ ಈ ಬಾರಿ ಮೂರು ಪಟ್ಟು ಕೇಂದ್ರ ಪೊಲೀಸ್ ಪಡೆಗಳನ್ನು ನಿಯೋಜಿಸಲು ಸಿದ್ಧತೆ‌ ನಡೆದಿದೆ.

ಮೇ 10 ರಂದು ರಾಜ್ಯ ಚುನಾವಣೆ ನಿಗದಿಯಾಗಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರಾಜ್ಯ ಪೊಲೀಸರು ಸೂಕ್ತ ತಯಾರಿ ನಡೆಸಿಕೊಂಡಿದ್ದಾರೆ. ರಾಜ್ಯ ಮಾತ್ರವಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಕೇಂದ್ರ ಅರೆಸೇನಾ ಹಾಗೂ ಪ್ಯಾರಾಮಿಲಿಟರಿ ಪಡೆಗಳು ಕಾರ್ಯನಿರ್ವಹಿಸಲಿವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ 105 ಸೆಂಟ್ರಲ್ ಆರ್ಮಿ ಪಡೆ ಕಾರ್ಯನಿರ್ವಹಿಸಿತ್ತು. ಈ ಬಾರಿ 405 ಕೇಂದ್ರ ಪಡೆಗಳು ಭದ್ರತೆಗೆ ನಿಯೋಜಿಸಲಾಗುತ್ತಿದೆ. ಇದು ಕಳೆದ ಸಲಕ್ಕೆ ಹೋಲಿಸಿದರೆ ಮೂರು ಪಟ್ಟು ಹೆಚ್ಚು. ಈಗಾಗಲೇ 20 ಸಾವಿರ ಮಂದಿ ಒಳಗೊಂಡ ಆರ್ಮಿ ತಂಡ ರಾಜ್ಯಕ್ಕೆ ಆಗಮಿಸಿವೆ. ಚುನಾವಣೆ ಸಮೀಪಿಸುತ್ತಿದ್ದಂತೆ ನಿಯೋಜನೆಗೊಂಡ ಕೇಂದ್ರ ಪಡೆಗಳು ರಾಜ್ಯಕ್ಕೆ ಬರಲಿವೆ.

ಸ್ಥಳೀಯ ಪೊಲೀಸರ ಜೊತೆಗೆ ರಾಜ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೇಂದ್ರ ಮಿಲಿಟರಿ ಪಡೆ ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಲಿದೆ. ರಾಜ್ಯ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ಹಾಗೂ ರಾಜ್ಯ ಪೊಲೀಸ್ ಮೀಸಲು ಪಡೆ (ಕೆಎಸ್ಆರ್​​ಪಿ) ಎಡಿಜಿಪಿ ಸೀಮಂತ್ ಕುಮಾರ್ ಅವರ ಸೂಚನೆಯಂತೆ ಸೆಂಟ್ರಲ್ ಟೀಂ ಕೆಲಸ ಮಾಡಲಿದೆ.

ಕೇಂದ್ರದ ಯಾವ್ಯಾವ ತಂಡ ಕೆಲಸ ಮಾಡಲಿದೆ?:ಹಿಂದಿಗಿಂತ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗುತ್ತಿದೆ. ಮುಖ್ಯವಾಗಿ ಕೇಂದ್ರ ಭದ್ರತಾ ಪಡೆ (ಬಿಎಸ್​​ಎಫ್), ಇಂಡೋ ಟಿಬಿಟಿಯನ್ ಬಾರ್ಡರ್ ಫೋರ್ಸ್, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪಡೆ, ಆಯಾ ರಾಜ್ಯಗಳ ಮಿಲಿಟರಿ ಪೋರ್ಸ್​ಗಳು ರಾಜ್ಯಕ್ಕೆ ಆಗಮಿಸಲಿವೆ.

ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದ್ದು, ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಳೀಯ ಪೊಲೀಸರ ಜೊತೆಗೆ ಸೆಂಟ್ರಲ್ ಮಿಲಿಟರಿ ಫೋರ್ಸ್ ಕಾರ್ಯನಿರ್ವಹಿಸಲಿವೆ. 100ಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳು ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಕೇಂದ್ರಗಳಾಗಿ ಪಟ್ಟಿ ಮಾಡಲಾಗಿದ್ದು ಈ ಸ್ಥಳಗಳಲ್ಲಿ ಆದ್ಯತೆ ಮೇರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸಲಾಗುತ್ತಿದೆ.

ಚುನಾವಣೆ ಸಂಬಂಧ ಗಲಾಟೆಯಾಗಿರುವ ಪ್ರದೇಶಗಳನ್ನು ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಕೇಂದ್ರಗಳಾಗಿ ಪರಿಗಣನೆ ಮಾಡಲಾಗಿದೆ. ರಾಮನಗರ,‌ ಕನಕಪುರ, ಚನ್ನಪಟ್ಟಣ, ಮಂಡ್ಯ, ಮಂಗಳೂರು, ಹುಬ್ಬಳ್ಳಿ, ಬೆಂಗಳೂರಿನ ಶಿವಾಜಿನಗರ, ಪುಲಕೇಶಿನಗರ, ಚಾಮರಾಜಪೇಟೆ ಸೇರಿದಂತೆ ಹಲವು ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಿಲಿಟರಿ ಪೋರ್ಸ್ ಗಳನ್ನು ಅಧಿಕ ಸಂಖ್ಯೆಯಲ್ಲಿ ನಿಯೋಜಿಸಲು ತಯಾರಿ ನಡೆಸಲಾಗಿದೆ ಎಂದು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿಯಿಂದ ಸಿಎಂ ಕಾರು ತಪಾಸಣೆ- ವಿಡಿಯೋ

ABOUT THE AUTHOR

...view details