ಬೆಂಗಳೂರು :ಯಲಹಂಕದ ಪುಟ್ಟೇನಹಳ್ಳಿ ಕೆರೆ ರಕ್ಷಣೆಗೆ ಮುಂದಿನ ಮೂರು ವಾರಗಳ ಒಳಗೆ ಸಂರಕ್ಷಣಾ ಸಮಿತಿಯನ್ನು ಪುನರ್ ರಚಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ವಿವಿಧ ಜಾತಿಯ ಪಕ್ಷಿಗಳ ಸಂರಕ್ಷಣಾ ಪ್ರದೇಶವಾಗಿರುವ ಯಲಹಂಕದ ಪುಟ್ಟೇನಹಳ್ಳಿ ಕೆರೆ ನಿರ್ವಹಣೆಯನ್ನು ಬಿಬಿಎಂಪಿಗೆ ವಹಿಸಿ ನಗರಾಭಿವೃದ್ಧಿ ಇಲಾಖೆ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಸ್ಥಳೀಯ ನಿವಾಸಿಗಳು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ ಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಈ ವೇಳೆ ಅರ್ಜಿದಾರರ ಪರ ವಕೀಲರು ವಾದಿಸಿ, ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಸೆಕ್ಷನ್ 36(ಬಿ) ಪ್ರಕಾರ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳು ಕೆರೆ ಸಂರಕ್ಷಣಾ ಸಮಿತಿಯಲ್ಲಿ ಸದಸ್ಯರಾಗಿರಬೇಕು. ಆದರೆ, ಯಲಹಂಕದ ಪುಟ್ಟೇನಹಳ್ಳಿ ಕೆರೆಯ ಸಂರಕ್ಷಣಾ ಸಮಿತಿಯಲ್ಲಿ ಅರಣ್ಯ ಇಲಾಖೆಯಿಂದ ಒಬ್ಬ ಪ್ರತಿನಿಧಿ ಇದ್ದಾರೆ. ರಾಜ್ಯದ ಮುಖ್ಯ ವನ್ಯಜೀವಿ ಪರಿಪಾಲಕರು ಸಮಿತಿಯ ಮುಖ್ಯಸ್ಥರಾಗಿದ್ದುಕೊಂಡು ಅಗತ್ಯ ಸಲಹೆ ನೀಡಬೇಕು. ಆದರೆ, ಸಮಿತಿ ಈವರೆಗೆ ಒಂದೇ ಒಂದು ಸಭೆ ನಡೆಸಿದ್ದು, ಅದಕ್ಕೆ ಮುಖ್ಯಸ್ಥರೇ ಹಾಜರಾಗಿಲ್ಲ ಎಂದು ವಿವರಿಸಿರು.