ಬೆಂಗಳೂರು: ವಿಧಾನ ಪರಿಷತ್ನಲ್ಲಿ ಇಂದು ಕೂಡ ರಾಜ್ಯದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗಂಭೀರ ಚರ್ಚೆಗಳು ನಡೆದವು.
ಹಂಪಿ ಉತ್ಸವ, ಗ್ರಾಮೀಣ ಭಾಗದಲ್ಲಿ ಅಂತರ್ಜಲ ಸ್ಥಿತಿಗತಿ, ಅಂಗನವಾಡಿ, ಶಾಲಾ ಕಟ್ಟಡಗಳ ಸ್ಥಿತಿಗತಿ, ಸರ್ಕಾರಿ ಶಾಲಾ ಬಸ್ಗಳಲ್ಲಿ ರಿಯಾಯಿತಿ, ಬಸ್ ಪಾಸ್ ಸೌಲಭ್ಯ, ಬಿಎಂಟಿಸಿ ಬಸ್ ಅಪಘಾತ, ಶುದ್ಧ ಕುಡಿಯುವ ನೀರಿನ ಘಟಕ, ಗ್ರಾಮ ಪಂಚಾಯ್ತಿ ಕ್ರಿಯಾ ಯೋಜನೆ ಮಂಜೂರು, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಇತ್ಯಾದಿ ವಿಚಾರಗಳ ಕುರಿತು ಚರ್ಚೆ ನಡೆಯಿತು.
ಅಂಗನವಾಡಿ ಸಮಸ್ಯೆ ಹಾಗೂ ಸ್ವಚ್ಛ ಭಾರತ್ ವಿಚಾರವಾಗಿ ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆ ದೊಡ್ಡ ಚರ್ಚೆಗೆ ಕಾರಣವಾಯಿತು. ಪರಿಷತ್ ಸದಸ್ಯರ ಪ್ರಶ್ನೆಗೆ ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ಶಶಿಕಲಾ ಜೊಲ್ಲೆ, ಮಾಧುಸ್ವಾಮಿ ಮತ್ತಿತರ ಸಚಿವರು ಚರ್ಚೆಯಲ್ಲಿ ಪಾಲ್ಗೊಂಡು ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸುವ ಭರವಸೆ ನೀಡಿದರು.