ಬೆಂಗಳೂರು: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಿನ್ನೆ ಪಕ್ಷದ ಕಚೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಅಗೌರವವನ್ನುಂಟು ಮಾಡಿದ ಆರೋಪದ ಮೇಲೆ ವಕ್ತಾರ ಕೆ.ಹೆಚ್.ಕುಮಾರ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ಜೆಡಿಎಸ್ ಕಚೇರಿಯಲ್ಲಿ ನಿನ್ನೆ ಬೆಂಗಳೂರು ನಗರದ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ, ರಾಜ್ಯಸಭಾ ಸದಸ್ಯ ಕುಪೇಂದ್ರರೆಡ್ಡಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಸಭೆ ನಡೆಯುತ್ತಿದ್ದ ವೇಳೆ ಅನಗತ್ಯವಾಗಿ ಮಧ್ಯ ಪ್ರವೇಶಿಸಿ ಮೈಕ್ನನ್ನು ಕಸಿದುಕೊಳ್ಳಲು ಕುಮಾರ್ ಪ್ರಯತ್ನಪಟ್ಟಿದ್ದು, ಈ ನಡವಳಿಕೆ ಕಾರ್ಯಕರ್ತರಿಗೆ ಪ್ರಚೋದನೆ ನೀಡುವ ರೀತಿಯಲ್ಲಿ ಇದೆ. ಜೊತೆಗೆ ದೇವೇಗೌಡರು ಸೇರಿದಂತೆ ಇತರ ನಾಯಕರಿಗೆ ಅಗೌರವವನ್ನುಂಟು ಮಾಡಿದ್ದಾರೆ.