ಕರ್ನಾಟಕ

karnataka

By ETV Bharat Karnataka Team

Published : Nov 11, 2023, 12:13 PM IST

Updated : Nov 11, 2023, 6:09 PM IST

ETV Bharat / state

ದೀಪಾವಳಿ ಹಬ್ಬ : ಮಣ್ಣಿನ ಹಣತೆಗಳ ಖರೀದಿಯಲ್ಲಿ ನಿರತರಾದ ಸಿಲಿಕಾನ್ ಸಿಟಿ ಮಂದಿ

Diwali celebration; ದೇಶದೆಲ್ಲೆಡೆ ದೀಪಾವಳಿ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಬೆಂಗಳೂರಿನಲ್ಲಿ ಜನರು ದೀಪಾವಳಿ ಹಬ್ಬದ ಪ್ರಯುಕ್ತ ಪರಿಸರ ಸ್ನೇಹಿ ದೀಪಗಳ ಖರೀದಿಯಲ್ಲಿ ತೊಡಗಿದ್ದಾರೆ.

ಮಣ್ಣಿನ ಹಣತೆಗಳ ಖರೀದಿಯಲ್ಲಿ ಸಿಲಿಕಾನ್ ಸಿಟಿ ಮಂದಿ
ಮಣ್ಣಿನ ಹಣತೆಗಳ ಖರೀದಿಯಲ್ಲಿ ಸಿಲಿಕಾನ್ ಸಿಟಿ ಮಂದಿ

ದೀಪಾವಳಿ ಹಬ್ಬ : ಮಣ್ಣಿನ ಹಣತೆಗಳ ಖರೀದಿಯಲ್ಲಿ ನಿರತರಾದ ಸಿಲಿಕಾನ್ ಸಿಟಿ ಮಂದಿ

ಬೆಂಗಳೂರು: ದೀಪಾವಳಿ ಹಬ್ಬದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಮೂರು ದಿನಗಳ ಕಾಲ ಸಾಲು ಸಾಲು ದೀಪಗಳನ್ನು ಹಚ್ಚಿ ಸಂಭ್ರಮಿಸುವುದು ಈ ಹಬ್ಬದ ಸಂಪ್ರದಾಯ. ಅಂಧಕಾರವ ಕಳೆದು ಬೆಳಕಿನೆಡೆಗೆ ಕರೆದುಕೊಂಡು ಹೋಗುವ ದೀಪಗಳ ಹಬ್ಬವನ್ನು ಸ್ವಾಗತಿಸಲು ನಗರದ ಮಾರುಕಟ್ಟೆಯಲ್ಲಿ ಬಗೆಬಗೆಯ ಹಣತೆಗಳು ಬಂದಿವೆ. ಮಣ್ಣಿನ ದೀಪಗಳು ದುಬಾರಿ ಎನಿಸಿದರೂ ಪರಿಸರ ಸ್ನೇಹಿ ದೀಪಗಳಾಗಿರುವುದರಿಂದ ಬೇಡಿಕೆ ಹೆಚ್ಚಿದೆ. ನಗರದಲ್ಲಿ ಜೇಡಿ ಮಣ್ಣಿನಿಂದ ಹೂವು, ಆನೆಯ ಮಾದರಿಯ ದೀಪ, ನವಿಲುಗರಿ ಮತ್ತು ಮಹಿಳಾ ಪ್ರತಿರೂಪದ ದೀಪ ಸೇರಿದಂತೆ ಬಣ್ಣ ಬಣ್ಣದ ಹಣತೆಗಳು ಗ್ರಾಹಕರನ್ನು ಆಕರ್ಷಿಸುತ್ತಿವೆ.

ದೀಪಾವಳಿ ಹಿನ್ನೆಲೆ ಮಲ್ಲೇಶ್ವರ, ರಾಜಾಜಿನಗರ, ಜೆಪಿ ನಗರ, ವಸಂತನಗರ, ಶಿವಾಜಿನಗರ, ಶೇಷಾದ್ರಿಪುರ ಸೇರಿದಂತೆ ವಿವಿಧೆಡೆ ದೀಪಗಳ ಖರೀದಿ ಭರದಿಂದ ಸಾಗಿದೆ. ಮಣ್ಣಿನ ಹಣತೆ, ಮಡಿಕೆ, ಹೂಕುಂಡ ಮನೆಯ ಅಲಂಕಾರಿಕ ವಸ್ತುಗಳನ್ನು ಜನರು ಖರೀದಿಸುತ್ತಿದ್ದಾರೆ. ಬಣ್ಣ, ಆಕೃತಿ, ಗಾತ್ರಕ್ಕನುಗುಣವಾಗಿ ಒಂದು ಹಣತೆಗೆ 10 ರೂ. ಗಳಿಂದ 250 ರೂಪಾಯಿವರೆಗೆ ಮಾರಾಟ ಮಾಡಲಾಗುತ್ತಿದೆ.

ದೀಪದಿಂದ ದೀಪವ ಹಚ್ಚಬೇಕು ಮಾನವ, ಪ್ರೀತಿಯಿಂದ ಪ್ರೀತಿ ಹಂಚುವ ಹಾಗೇ ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳ ಬಾಕಿ ಇದೆ. ತುಳಸಿ ಮದುವೆವರೆಗೆ ದೀಪಗಳನ್ನು ಹಚ್ಚಿ ಸಂಭ್ರಮಿಸುತ್ತೇವೆ ಎಂದು ಗ್ರಾಹಕರಾದ ದೀಪ ಎಂಬುವರು ತಿಳಿಸಿದ್ದಾರೆ.

ಪರಿಸರ ಸ್ನೇಹಿ ದೀಪಗಳಿಗೆ ಬಹು ಬೇಡಿಕೆ :ಪರಿಸರಸ್ನೇಹಿ ಮಣ್ಣಿನಿಂದ ತಯಾರಿಸಲಾದ ಹಣತೆಗಳಿಗೆ ಈ ಬಾರಿ ಬಹುಬೇಡಿಕೆಯಿದೆ.ಪಟಾಕಿಗಳನ್ನು ಬದಿಗಿಟ್ಟು ಈ ಬಾರಿ ಪರಿಸರ ಮಾಲಿನ್ಯಗೊಳಿಸದೇ ಹೆಚ್ಚು ಹಣತೆಗಳನ್ನು ಕೊಂಡು ದೀಪ ಹಚ್ಚಿ ಸಂಭ್ರಮಿಸುವ ಸಂಕಲ್ಪವನ್ನು ಎಲ್ಲರೂ ಮಾಡಬೇಕು ಎಂದು ರಾಜ್ಯ ಕುಂಬಾರರ ಸಂಘದ ರಾಜ್ಯಾಧ್ಯಕ್ಷ ನಾಗೇಶ್ ಶೆಟ್ಟಿ ತಿಳಿಸಿದ್ದಾರೆ.

ತಲೆತಲಾಂತರದಿಂದ ಇದನ್ನೇ ವೃತ್ತಿ ಜೀವನವನ್ನಾಗಿ ಜೀವನ ಸಾಗಿಸುತ್ತಿದ್ದೇವೆ. ಜೇಡಿ ಮಣ್ಣು ಕರ್ನಾಟಕದಲ್ಲಿ ಸಾಕಷ್ಟು ದೊರಕದ ಕಾರಣ ಆಂಧ್ರ ಪ್ರದೇಶ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಿಂದ ಆಮದು ಮಾಡಿಕೊಳ್ಳಬೇಕಾಗಿದೆ. ಮಣ್ಣಿನ ವಸ್ತುಗಳಿಗೆ ದೇಶ ವಿದೇಶಗಳಲ್ಲಿ ಬೇಡಿಕೆ ಹೆಚ್ಚಾಗುತ್ತಿದ್ದರೂ, ನಮ್ಮ ಸಮುದಾಯದಲ್ಲಿ ಜನಪ್ರತಿನಿಧಿಗಳ ಕೊರತೆಯಿಂದಾಗಿ ಸೂಕ್ತ ಮಾರುಕಟ್ಟೆ ಕಲ್ಪಿಸಲು ನಮ್ಮ ಕೆಲ ಅಹವಾಲನ್ನು ಸರ್ಕಾರಕ್ಕೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಕುಂಬಾರರ ಯುವಸೇನೆಯ ಸಂಸ್ಥಾಪನ ಅಧ್ಯಕ್ಷ ಜಗದೇವ್ ಕುಂಬಾರ್ ಹೇಳಿದ್ದಾರೆ.

ಇದನ್ನೂ ಓದಿ :ದೀಪಾವಳಿ ಸಂಭ್ರಮದಲ್ಲಿ ಶ್ರೀದೇವಿ ಮಕ್ಕಳು; ಅಭಿಮಾನಿಗಳಿಗೆ ಹಬ್ಬದ ಶುಭಕೋರಿದ ವರುಣ್​ ಧವನ್​

Last Updated : Nov 11, 2023, 6:09 PM IST

ABOUT THE AUTHOR

...view details