ಕರ್ನಾಟಕ

karnataka

ETV Bharat / state

ಗಲಭೆ ಪ್ರಕರಣ: ರವಿ ಕುಮಾರ್ ಹೆಗಲಿಗೆ ತನಿಖೆಯ ಹೆಚ್ಚಿನ ಜವಾಬ್ದಾರಿ - Ravi Kumar

ಡಿ.ಜೆ.ಹಳ್ಳಿ, ಕೆ‌.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ ತನಿಖೆ ಬಹುಮುಖ್ಯ ಪಾತ್ರ ನಿರ್ವವಹಿಸುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಸಿಸಿಬಿ 1 ವಿಭಾಗದ ಕುಲ್ದೀಪ್ ಜಾಗಕ್ಕೆ ದಕ್ಷ ಅಧಿಕಾರಿ ರವಿ ಕುಮಾರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ.

DJ halli KG halli riot: Ravi Kumar is taking responsibility of further investigation
ಡಿ. ಜೆ ಹಳ್ಳಿ- ಕೆ. ಜಿ ಹಳ್ಳಿ ಗಲಭೆ ಪ್ರಕರಣ: ಪ್ರಕರಣದ ಹೆಚ್ಚಿನ ಜವಾಬ್ದಾರಿ ರವಿ ಕುಮಾರ್ ಹೆಗಲಿಗೆ

By

Published : Aug 27, 2020, 3:03 PM IST

ಬೆಂಗಳೂರು: ಡಿ.ಜೆ.ಹಳ್ಳಿ ಹಾಗು ಕೆ‌.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ತನಿಖೆ ನಡೆಯುತ್ತಿದೆ. ಇದೀಗ ಸಿಸಿಬಿ 1 ವಿಭಾಗದ ಕುಲ್ದೀಪ್ ಅವರ ಜಾಗಕ್ಕೆ ರವಿ ಕುಮಾರ್ ಅವರನ್ನು ಸರ್ಕಾರ ವರ್ಗಾಯಿಸಿದ್ದು, ಇಂದು ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಪೊಲೀಸ್‌ ಅಧಿಕಾರಿ ರವಿ ಕುಮಾರ್‌ ಅವರು ಡಿ.ಜೆ.ಹಳ್ಳಿ- ಕೆ.ಜಿ.ಹಳ್ಳಿ ಗಲಭೆ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ವಹಿಸಿಕೊಂಡರು.

ಗಲಭೆ ವಿಚಾರ ಗೊತ್ತಾಗುತ್ತಿದ್ದ ಹಾಗೆ ಒಂಟಿಯಾಗಿ ಲಾಠಿ ಹಿಡಿದು ಫೇಸ್‌ಬುಕ್‌ನಲ್ಲಿ ವಿವಾದಾತ್ಮಕವಾಗಿ ಪೋಸ್ಟ್​ ಮಾಡಿದ್ದ ಆರೋಪಿ ನವೀನ್ ಮುಖಕ್ಕೆ ಬಟ್ಟೆ ಕಟ್ಟಿ ಗಲಭೆ ಮಧ್ಯೆಯೇ ಬಂಧಿಸಿ ರವಿ ಕುಮಾರ್‌ ಸೈ ಎನಿಸಿಕೊಂಡಿದ್ದರು. ಹಾಗೆಯೇ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿಕೆ, ಮಾಜಿ‌ ಮೇಯರ್ ಸಂಪತ್‌ ಕುಮಾರ್‌ ಪಿಎ ಅರುಣ್ ಹೇಳಿಕೆ, ಘಟನೆಯ ಪ್ರಮುಖ ಆರೋಪಿಗಳಾದ ಸಮೀಯುದ್ದೀನ್, ಮುಜಾಮಿಲ್ ಅವರ ತನಿಖೆಯನ್ನೂ ರವಿ ಅವರೇ ನಡೆಸುತ್ತಿದ್ದಾರೆ.

ಸರ್ಕಾರ ರವಿ ಕುಮಾರ್‌ ಕರ್ತವ್ಯ ದಕ್ಷತೆ ಪರಿಗಣಿಸಿ ಕೆಎಸ್​ಪಿಎಸ್ ಬ್ಯಾಚ್‌ನಿಂದ ಬಡ್ತಿ ನೀಡಿದ್ದು, ನಗರದ ರೌಡಿ ಸ್ಕ್ವಾಡ್, ಗಾಂಜಾ, ಸೈಬರ್ ಪ್ರಕರಣ, ಸಿಸಿಬಿ ವಿಂಗ್‌ಗಳನ್ನು ನಿಭಾಯಿಸುವ ಜವಾಬ್ದಾರಿಯನ್ನು ಇವರಿಗೆ ವಹಿಸಿದೆ. ಈಗಾಗಲೇ ಸಬ್ ಇನ್ಸ್​ಪೆಕ್ಟರ್, ಇನ್ಸ್‌ಪೆಕ್ಟರ್, ಎಸಿಪಿಯಾಗಿ ಕರ್ತವ್ಯ ನಿಭಾಯಿಸಿರುವ ಅನುಭವ ರವಿ ಕುಮಾರ್ ಅವರಿಗಿದೆ.

ABOUT THE AUTHOR

...view details