ಕರ್ನಾಟಕ

karnataka

By

Published : Nov 20, 2021, 10:09 PM IST

ETV Bharat / state

ನಾಳೆ ನಾಡಿದ್ದು ವಿವಿಧ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿರುವ ಡಿ ಕೆ ಶಿವಕುಮಾರ್​

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಾಳೆಯಿಂದ ಎರಡು ದಿನ ವಿವಿಧ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ..

DK shivakumar held two days district tour
ನಾಳೆ ನಾಡಿದ್ದು ವಿವಿಧ ಜಿಲ್ಲೆಗಳಿಗೆ ಡಿಕೆಶಿ ಪ್ರವಾಸ

ಬೆಂಗಳೂರು :ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಾಳೆಯಿಂದ ಎರಡು ದಿನ ವಿವಿಧ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಬೆಳಗ್ಗೆ ಒಂಬತ್ತು ಗಂಟೆಗೆ ಬೆಂಗಳೂರಿನಿಂದ ತುಮಕೂರಿಗೆ ಪ್ರಯಾಣ ಬೆಳೆಸುವ ಶಿವಕುಮಾರ್ ಅವರು, ಎರಡು ದಿನ ತುಮಕೂರು ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಮೊದಲು ತುಮಕೂರು ನಂತರ ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಪಕ್ಷ ಹಾಗೂ ಖಾಸಗಿ ಕಾರ್ಯಕ್ರಮಗಳಲ್ಲಿ ಇದೇ ಸಂದರ್ಭ ಅವರು ಪಾಲ್ಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ತುಮಕೂರಿನಲ್ಲಿ ಆಯೋಜಿಸಿರುವ ಜನಜಾಗೃತಿ ಅಭಿಯಾನ ಪಾದಯಾತ್ರೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಸಂಜೆ 2.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವ ಅವರು, ಹೆಚ್​ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರ್ಗಿಗೆ ತೆರಳಲಿದ್ದಾರೆ. ಅಲ್ಲಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್​​ಗೆ ಆಗಮಿಸುತ್ತಾರೆ.

ರಾತ್ರಿ ಮಾಜಿ ಸಚಿವ ರಾಜಶೇಖರ್ ಪಾಟೀಲ್ ಪುತ್ರಿಯ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಲಬುರ್ಗಿಯಲ್ಲಿ ವಾಸ್ತವ್ಯ ಹೂಡಲಿರುವ ಅವರು, ಸೋಮವಾರ ಬೆಳಗ್ಗೆ 10.30ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರು ತಲುಪಲಿದ್ದಾರೆ.

ABOUT THE AUTHOR

...view details