ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಗುಜರಾತ್ನ ಭರೂಚ ಜಿಲ್ಲೆಯ ಪಿರಮಾಣ್ ಗ್ರಾಮದಲ್ಲಿ ಹಿರಿಯ ಕಾಂಗ್ರೆಸ್ ಮಖಂಡ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಮೆರವಣಿಗೆ ಹಾಗೂ ಅಂತ್ಯ ಸಂಸ್ಕಾರದಲ್ಲಿ ಗುರುವಾರ ಪಾಲ್ಗೊಂಡರು.
ನಿನ್ನೆ ಸಂಜೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಗುಜರಾತಿಗೆ ತೆರಳಿದ್ದ ಶಿವಕುಮಾರ್, ಅಲ್ಲಿಯೇ ವಾಸ್ತವ್ಯ ಹೂಡಿದ್ದರು. ಇಂದು ಬೆಳಗ್ಗೆ ಅಹ್ಮದ್ ಪಟೇಲ್ ನಿವಾಸಕ್ಕೆ ತೆರಳಿ ಪಟೇಲ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದಾದ ಬಳಿಕ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದರು.
ಸಂಜೆ ವೇಳೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗುಜರಾತ್ನ ಭರೂಚ ಜಿಲ್ಲೆಯ ಪಿರಮಾಣ್ ಗ್ರಾಮದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಅವರ ನಿವಾಸಕ್ಕೆ ತೆರಳಿ, ಅಹಮದ್ ಪಟೇಲ್ ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.