ಕರ್ನಾಟಕ

karnataka

ETV Bharat / state

ಆರ್.ಆರ್ ನಗರದಲ್ಲಿ ವೋಟಿಂಗ್ ಪ್ಯಾಟ್ರನ್ ಚೇಂಜ್ ಆಗಿದೆ: ಸಂಸದ ಡಿ.ಕೆ.ಸುರೇಶ್

ಹೀಗೆ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. ಇವಿಎಂ ರದ್ದು ಮಾಡಿ ಬ್ಯಾಲೆಟ್ ಪೇಪರ್ ತರಬೇಕು. ಎಲ್ಲಾ ಪಕ್ಷಗಳು ಇದನ್ನ ಒತ್ತಾಯಿಸಬೇಕು. ಈ ಕುರಿತು ಸುಪ್ರೀಂಕೋರ್ಟ್​ಗೆ ಪತ್ರ ಅಭಿಯಾನ ಮಾಡಬೇಕು..

By

Published : Nov 13, 2020, 2:11 PM IST

ಇವಿಎಂ ಹ್ಯಾಕ್ ಬಗ್ಗೆ ಸಂಸದ ಡಿಕೆ ಸುರೇಶ್ ಹೇಳಿಕೆ
ಇವಿಎಂ ಹ್ಯಾಕ್ ಬಗ್ಗೆ ಸಂಸದ ಡಿಕೆ ಸುರೇಶ್ ಹೇಳಿಕೆ

ಬೆಂಗಳೂರು:ಆರ್.ಆರ್ ನಗರದಲ್ಲಿ ಅಷ್ಟೊಂದು ಅಂತರದ ಸೋಲು ಸಾಧ್ಯವಿಲ್ಲ. ವೋಟಿಂಗ್ ಪ್ಯಾಟ್ರನ್ ಚೇಂಜ್ ಆಗಿದೆ ಎಂದು ಸಂಸದ ಡಿ.ಕೆ.ಸುರೇಶ್ ಇವಿಎಂ ಹ್ಯಾಕ್ ಬಗ್ಗೆ ಆರೋಪಿಸಿದ್ದಾರೆ.

ಇವಿಎಂ ದುರ್ಬಳಕೆ ಆರೋಪ ಎಲ್ಲೆಡೆ ಕೇಳಿ ಬರುತ್ತಿದೆ. ಅಮೆರಿಕದಲ್ಲೂ ಬ್ಯಾಲೆಟ್ ಪೇಪರ್ ನಡೆಯುತ್ತೆ. ಇವಿಎಂ ದುರ್ಬಳಕೆ ಮಾಡಿಕೊಳ್ಳಲು ಅವಕಾಶವಿದೆ. ಚುನಾವಣೆ ಆಯೋಗ ಮೂಕ ಪ್ರೇಕ್ಷರಂತೆ ಆಗಿದೆ ಎಂದು ಡಿ.ಕೆ.ಸುರೇಶ್ ಕಿಡಿ ಕಾರಿದರು.

ಹೀಗೆ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. ಇವಿಎಂ ರದ್ದು ಮಾಡಿ ಬ್ಯಾಲೆಟ್ ಪೇಪರ್ ತರಬೇಕು. ಎಲ್ಲಾ ಪಕ್ಷಗಳು ಇದನ್ನ ಒತ್ತಾಯಿಸಬೇಕು. ಈ ಕುರಿತು ಸುಪ್ರೀಂಕೋರ್ಟ್​ಗೆ ಪತ್ರ ಅಭಿಯಾನ ಮಾಡಬೇಕು ಎಂದರು.

ಪತ್ರಕರ್ತ ರವಿ ಬೆಳಗೆರೆ ನಿಧನಕ್ಕೆ ಸಂತಾಪ: ರವಿ ಬೆಳಗೆರೆ ಸಮಾಜ ಸುಧಾರಣೆಗೆ ಪ್ರಯತ್ನ ಮಾಡಿದವರು. ನೇರ ನಡೆ-ನುಡಿಗೆ ಹೆಸರಾದವರು. ಕನ್ನಡ ಪತ್ರಿಕೋದ್ಯಮ ಅವರನ್ನ ಕಳೆದುಕೊಂಡಿದೆ. ಭಗವಂತ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

For All Latest Updates

ABOUT THE AUTHOR

...view details