ಕರ್ನಾಟಕ

karnataka

By

Published : Nov 26, 2021, 2:32 PM IST

Updated : Nov 26, 2021, 6:01 PM IST

ETV Bharat / state

ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಪ್ರಕರಣ : ಕುಷ್ಠರೋಗ ನಿವಾರಣಾಧಿಕಾರಿ ಅಮಾನತು

ತನಿಖಾ ವರದಿಯನ್ನು ಜಿಲ್ಲಾಧಿಕಾರಿಗಳು ಪೂರಕ ದಾಖಲಾತಿಗಳೊಂದಿಗೆ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗಳ ವರದಿಯನ್ವಯ ಶಿಸ್ತುಕ್ರಮಕ್ಕಾಗಿ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಡಾ.ರತ್ನಾಕರ್ ಕರ್ತವ್ಯ ನಿರ್ಲಕ್ಷ್ಯತೆ ಗಂಭೀರ ಸ್ವರೂಪದಾಗಿದ್ದಾಗಿದೆ. ಸರ್ಕಾರಿ ನೌಕರರಿಗೆ ತಕ್ಕದಲ್ಲದ ರೀತಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ..

Doctor rude behavior with women, Leprosy Prevention Officer suspension, Mangaluru doctor news, Mangaluru doctor suspension, Mangaluru crimen news, ಮಹಿಳಾ ಸಿಬ್ಬಂದಿ ಜೊತೆ ಅಸಭ್ಯ ವರ್ತನೆ ಪ್ರಕರಣ, ಕುಷ್ಠರೋಗ ನಿವಾರಣಾಧಿಕಾರಿ ಅಮಾನತು, ಮಂಗಳೂರು ವೈದ್ಯ ಸುದ್ದಿ, ಮಂಗಳೂರು ವೈದ್ಯ ಅಮಾನತು, ಮಂಗಳೂರು ಅಪರಾಧ ಸುದ್ದಿ,
ಕುಷ್ಠರೋಗ ನಿವಾರಣಾಧಿಕಾರಿ ಅಮಾನತು

ಬೆಂಗಳೂರು/ಮಂಗಳೂರು :ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ದಕ್ಷಿಣಕನ್ನಡ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ರತ್ನಾಕರ್‌ರನ್ನ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ವೈದ್ಯಾಧಿಕಾರಿ ಕಚೇರಿಯ 9 ಮಹಿಳಾ ಸಿಬ್ಬಂದಿ ಜತೆಗೆ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿತ್ತು. ರಾಜ್ಯಾದ್ಯಂತ ಸಂಚಲನ ಮೂಡಿಸಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಶಿಸ್ತು ಕ್ರಮಕೈಗೊಂಡು ಅಮಾನತು ಆದೇಶ ಹೊರಡಿಸಿತು.

ದ.ಕನ್ನಡ ಜಿಲ್ಲಾ ಕುಷ್ಠರೋಗ ನಿವಾರಕಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ದೌರ್ಜನ್ಯ ಆಗುತ್ತಿರುವ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಹಿಳಾ ಆಂತರಿಕ ದೂರು ಸಮಿತಿಯಲ್ಲಿ ದೂರು ಸ್ವೀಕೃತಿಯಾಗಿತ್ತು. ಮಹಿಳಾ ಆಂತರಿಕ ದೂರು ಸಮಿತಿ ತನಿಖೆ ನಡೆಸಿದೆ.

ದ.ಕ ಜಿಲ್ಲಾಧಿಕಾರಿ ಬೈಟ್

ತನಿಖೆಯಲ್ಲಿ ಹಾಜರಾದ ಮಹಿಳಾ ಸಿಬ್ಬಂದಿ ನೀಡಿರುವ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿದ ಸಮಿತಿ, ಮುಂದಿನ ದಿನಗಳಲ್ಲಿ ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಯವರ ಅಧೀನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ಮೇಲೆ ಯಾವುದೇ ರೀತಿಯ ದೌರ್ಜನ್ಯಗಳು ನಡೆಯದಂತೆ ಕ್ರಮವಹಿಸಲು ಕೋರಿ, ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ 2013ರ ಪ್ರಕಾರ ವೈದ್ಯಾಧಿಕಾರಿಯ ಮೇಲೆ ಶಿಸ್ತು ಕ್ರಮಕ್ಕಾಗಿ ಶಿಫಾರಸು ಮಾಡಿದೆ.

ಈ ತನಿಖಾ ವರದಿಯನ್ನು ಜಿಲ್ಲಾಧಿಕಾರಿಗಳು ಪೂರಕ ದಾಖಲಾತಿಗಳೊಂದಿಗೆ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗಳ ವರದಿಯನ್ವಯ ಶಿಸ್ತುಕ್ರಮಕ್ಕಾಗಿ ಆಯುಕ್ತರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಡಾ.ರತ್ನಾಕರ್ ಕರ್ತವ್ಯ ನಿರ್ಲಕ್ಷ್ಯತೆ ಗಂಭೀರ ಸ್ವರೂಪದಾಗಿದ್ದಾಗಿದೆ. ಸರ್ಕಾರಿ ನೌಕರರಿಗೆ ತಕ್ಕದಲ್ಲದ ರೀತಿ ನಡೆದುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಅವರ ವಿರುದ್ಧ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) ಅಧಿನಿಯಮ 2013 ಹಾಗೂ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮ 1957ರನ್ವಯ ಶಿಸ್ತುಕ್ರಮ ಕೈಗೊಳ್ಳಲು ನಿರ್ಣಯಿಸಲಾಗಿದೆ. ಹೀಗಾಗಿ, ತಕ್ಷಣದಿಂದ ಜಾರಿಗೆ ಬರುವಂತೆ ಆ ಅಧಿಕಾರಿಯನ್ನು ಸೇವೆಯಿಂದ ಅಮಾನತುಪಡಿಸಲು ಸರ್ಕಾರವು ತೀರ್ಮಾನಿಸಿದೆ ಎಂದು ಆದೇಶ ಹೊರಡಿಸಿದೆ.

ದ.ಕ ಜಿಲ್ಲಾಧಿಕಾರಿ ಹೇಳಿದ್ದೇನು?

ದ.ಕ.ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿಯ ಅನುಚಿತ ವರ್ತನೆಯ ಫೋಟೊ, ವಿಡಿಯೋ ಬಗ್ಗೆ ಡಿಹೆಚ್ಎಗೆ ದೂರು ಬಂದಿತ್ತು. ಈ ಬಗ್ಗೆ ಹಿರಿಯ ಆರೋಗ್ಯ ಅಧಿಕಾರಿಗಳ ಆಂತರಿಕ ದೂರು ಸಮಿತಿಯಲ್ಲಿ ತನಿಖೆ ನಡೆದಿದ್ದು, ಪ್ರಾಥಮಿಕ ತನಿಖೆಯಿಂದ ಅನುಚಿತವಾಗಿ ವರ್ತನೆ ಮಾಡಿರೋದು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ನ.8ರಂದು ರಾಜ್ಯ ಆರೋಗ್ಯ ಇಲಾಖೆ ಅಮಾನತುಗೊಳಿಸಿ ಆದೇಶಿಸಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಅಲ್ಲದೆ ಆತ ಆಸ್ಪತ್ರೆ ಬಿಲ್ ವಿಚಾರದಲ್ಲಿಯೂ ಅಕ್ರಮ ಎಸಗಿರುವುದು ಕಂಡು ಬಂದಿದ್ದು, ಈ ಬಗ್ಗೆಯೂ ತನಿಖೆ ನಡೆಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

(ಇದನ್ನೂ ಓದಿ:ಮಹಿಳಾ ಸಿಬ್ಬಂದಿಯೊಂದಿಗೆ ಸರ್ಕಾರಿ ಕಚೇರಿಯಲ್ಲೇ ನೋಡಲ್​ ಅಧಿಕಾರಿಯ ಚೆಲ್ಲಾಟ ಆರೋಪ: ಫೋಟೋ, ವಿಡಿಯೋ ವೈರಲ್)

Last Updated : Nov 26, 2021, 6:01 PM IST

ABOUT THE AUTHOR

...view details