ಬೆಂಗಳೂರು:ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಅವರ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಇಲ್ಲ ಅಂತ ಕಾಣುತ್ತದೆ. ನಿರ್ದಿಷ್ಟವಾದ ಮಾಹಿತಿ ಪಡೆದುಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದರೆ ಒಳ್ಳೆಯದಿತ್ತು. ಜವಾಬ್ದಾರಿ ಸ್ಥಾನದಲ್ಲಿ ಇದ್ದೀನಿ ಎಂದು ಹೇಳಿದ್ದೀರಿ. ಜನರಿಗೆ ದಾರಿತಪ್ಪಿಸುವ ಕೆಲಸ ಮಾಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ನಾಗೇಂದ್ರ ಅವರ ಕೇಸ್ ಮುಚ್ಚಿ ಹಾಕೋದು ನಮ್ಮ ಕಾರ್ಯವೈಖರಿಯಲ್ಲ. ಅವೆಲ್ಲಾ ನಿಮ್ಮ ಕಾರ್ಯಗಳು. ಸಾವಿನ ಮನೆಗೆ ಸಾಂತ್ವನ ಹೇಳಲು ಹೋದಾಗ ಕೆಲವರು ಕೆಲವರ ನಿರ್ದೇಶನದಂತೆ ಮಾಡಲು ಬಂದಿದ್ದರೇೆ ವಿನಃ ನೋವನ್ನು ಹಂಚಿಕೊಳ್ಳಲು ಅಲ್ಲ. ಸಾವಿನ ಮನೆಯಲ್ಲಿ ರಾಜಕೀಯ ಮಾಡೋದು ನಿಮ್ಮ ವಿಕೃತಿ. ನಮ್ಮದು ಸಾಂತ್ವನ ಹೇಳುವ ಸುಸಂಸ್ಕೃತಿ ಎಂದು ಸರಣಿ ಟ್ವೀಟ್ಗಳ ಮೂಲಕ ಹರಿಹಾಯ್ದಿದ್ದಾರೆ.