ಕರ್ನಾಟಕ

karnataka

By

Published : Sep 13, 2019, 8:14 PM IST

ETV Bharat / state

ಬ್ಯಾಟರಾಯನಪುರಕ್ಕೆ ನೀಡಿದ್ದ ಅನುದಾನದಲ್ಲಿ ಬದಲಾವಣೆ ಮಾಡಬೇಡಿ: ಸಿಎಂಗೆ ಕೃಷ್ಣ ಬೈರೇಗೌಡ ಮನವಿ

ಕಸ ವಿಲೇವಾರಿ ನಮ್ಮ ಕ್ಷೇತ್ರದಲ್ಲಿ ಆಗುತ್ತಿದ್ದ ಕಾರಣ ಹಿಂದಿನ‌ ಸರ್ಕಾರ ಅಭಿವೃದ್ಧಿಗೆ ಅನುದಾನ ನೀಡುತ್ತಿತ್ತು. ಈಗ ‌ಆ ಅನುದಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು.‌ ಸ್ಥಳೀಯರ ಸಮಸ್ಯೆ ಪರಿಹರಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ‌ ಮಾಜಿ ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದ್ದಾರೆ.

ಬ್ಯಾಟರಾಯನಪುರಕ್ಕೆ ನೀಡಿದ್ದ ಅನುದಾನದಲ್ಲಿ ಬದಲಾವಣೆ ಮಾಡಬೇಡಿ: ಸಿಎಂಗೆ ಕೃಷ್ಣ ಬೈರೇಗೌಡ ಮನವಿ

ಬೆಂಗಳೂರು: ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರಕ್ಕೆ ಹಿಂದಿನ ಸರ್ಕಾರ ಘೋಷಿಸಿದ್ದ ಅನುದಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ‌ ಮಾಜಿ ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದ್ದಾರೆ.

ಬ್ಯಾಟರಾಯನಪುರಕ್ಕೆ ನೀಡಿದ್ದ ಅನುದಾನದಲ್ಲಿ ಬದಲಾವಣೆ ಮಾಡಬೇಡಿ: ಸಿಎಂಗೆ ಕೃಷ್ಣ ಬೈರೇಗೌಡ ಮನವಿ

ಸಿಎಂ ಗೃಹ ಕಚೇರಿ ಕೃಷ್ಣಾಗೆ ಮಾಜಿ ಸಚಿವ ಕೃಷ್ಣಬೈರೇಗೌಡ ಭೇಟಿ ನೀಡಿದರು‌. ಕ್ಷೇತ್ರದ ಅಭಿವೃದ್ಧಿ ಕಾರ್ಯ, ಅನುದಾನ ಕುರಿತು ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉತ್ಪತ್ತಿಯಾಗುವ ಬಹುತೇಕ‌ ಕಸ‌ದಲ್ಲಿ ಮುಕ್ಕಾಲುಪಾಲು ನಮ್ಮ ಕ್ಷೇತ್ರದಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಈ ವಿಚಾರಕ್ಕೆ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದ್ದು, ಪ್ರತಿಭಟನೆಯನ್ನೂ ಮಾಡಿದ್ದಾರೆ. ಸಿಎಂ ಅವರೇ ಬೆಂಗಳೂರು ಅಭಿವೃದ್ಧಿ ನೋಡಿಕೊಳ್ಳುತ್ತಿರುವ ಕಾರಣ ಇದನ್ನು ಅವರ ಗಮನಕ್ಕೆ ತಂದಿದ್ದೇನೆ ಎಂದರು.

ಕಸ ವಿಲೇವಾರಿ ನಮ್ಮ ಕ್ಷೇತ್ರದಲ್ಲಿ ಆಗುತ್ತಿದ್ದ ಕಾರಣ ಹಿಂದಿನ‌ ಸರ್ಕಾರ ಅಭಿವೃದ್ಧಿಗೆ ಅನುದಾನ ನೀಡುತ್ತಿತ್ತು. ಈಗ ‌ಆ ಅನುದಾನದಲ್ಲಿ ಯಾವುದೇ ಬದಲಾವಣೆ ಮಾಡಬಾರದು.‌ ಸ್ಥಳೀಯರ ಸಮಸ್ಯೆ ಪರಿಹರಿಸಬೇಕು ಎಂದು ಮನವಿ ಮಾಡಿದ್ದೇನೆ ಈ ಕುರಿತು ಪರಿಶೀಲನೆ ಮಾಡುವುದಾಗಿ ಸಿಎಂ ಕೂಡ ಭರವಸೆ ನೀಡಿದ್ದಾರೆ ಎಂದರು.

ABOUT THE AUTHOR

...view details