ಕರ್ನಾಟಕ

karnataka

ETV Bharat / state

ಲಘು ರೋಗಲಕ್ಷಣದವರನ್ನೂ ದಾಖಲಿಸಿದ್ದಕ್ಕಾಗಿ ಕೆಂಡಾಮಂಡಲ: ಅಧಿಕಾರಿಗಳ ಅಮಾನತಿಗೆ ಸಚಿವ ಸುಧಾಕರ್ ಸೂಚನೆ - ಬೆಂಗಳೂರು ಸುದ್ದಿ

ಡಾ.ಕೆ.ಸುಧಾಕರ್ ಇಂದಿರಾ ನಗರದಲ್ಲಿರುವ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದರು. ಕೊರೊನಾ ರೋಗಿಗಳ ಚಿಕಿತ್ಸೆ, ಸೌಲಭ್ಯಗಳ ಪರಿಶೀಲನೆ ನಡೆಸಿದ ಅವರು ವೈದ್ಯರು, ಸಿಬ್ಬಂದಿಗಳಿಂದ ಮಾಹಿತಿ ಪಡೆದು ಸಮಾಲೋಚನೆ ನಡೆಸಿದರು.

Dr. Sudhakar
ಡಾ.ಕೆ.ಸುಧಾಕರ್

By

Published : Jul 16, 2020, 1:37 PM IST

ಬೆಂಗಳೂರು:ಲಘು ರೋಗ ಲಕ್ಷಣ ಇರುವವರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿಕೊಂಡಿರುವುದಕ್ಕೆ ಕೆಂಡಾಮಂಡಲರಾದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಂಬಂಧಿಸಿದ ಅಧಿಕಾರಿಗಳ ಅಮಾನತಿಗೆ ಸೂಚನೆ ನೀಡಿದ್ದಾರೆ.

ಡಾ.ಕೆ.ಸುಧಾಕರ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ

ಡಾ.ಕೆ.ಸುಧಾಕರ್ ಇಂದಿರಾನಗರದಲ್ಲಿರುವ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದರು. ಕೊರೊನಾ ರೋಗಿಗಳ ಚಿಕಿತ್ಸೆ, ಸೌಲಭ್ಯಗಳ ಪರಿಶೀಲನೆ ನಡೆಸಿದ ಅವರು ವೈದ್ಯರು ಸಿಬ್ಬಂದಿಯಿಂದ ಮಾಹಿತಿ ಪಡೆದು ಸಮಾಲೋಚನೆ ನಡೆಸಿದರು. ನಂತರ ಕೊರೊನಾ ರೋಗಿಗಳ ಜೊತೆ ವಿಡಿಯೋ ಸಂವಾದ ನಡೆಸಿದರು. ಈ ವೇಳೆ, ರೋಗಿಗಳ ಮಾಹಿತಿ ಆಧರಿಸಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಸಚಿವರು ಲಘು ರೋಗಲಕ್ಷಣ ಇರುವವರನ್ನು ದಾಖಲು ಮಾಡಿಕೊಂಡಿರುವ ಬಗ್ಗೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಡಾ.ಕೆ.ಸುಧಾಕರ್ ಸಾರ್ವಜನಿಕ ಆಸ್ಪತ್ರೆಗೆ ಭೇಟಿ

15 ಫ್ಲೋ ಆಕ್ಸಿಜನ್ ಬೆಡ್ ಪೈಕಿ ಎರಡರಲ್ಲಿ ಮಾತ್ರ ರೋಗಿಗಳನ್ನು ದಾಖಲಿಸಿದ್ದಕ್ಕೆ ಕೆಂಡಾಮಂಡಲರಾದ ಅವರು ಸಂಬಂಧಿಸಿದ ಅಧಿಕಾರಿಗಳ ಅಮಾನತಿಗೆ ಸೂಚಿಸಿದ್ದಾರೆ. ಕೋವಿಡ್ ಕೇರ್ ಸೆಂಟರ್​ಗೆ ಹೋಗಬೇಕಿದ್ದವರನ್ನೂ ದಾಖಲು ಮಾಡಿದ್ದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

For All Latest Updates

ABOUT THE AUTHOR

...view details