ಬೆಂಗಳೂರು :ಬೀದರ್ ಶಾಲೆಯಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ನೀಡಿದ ಪ್ರಕರಣಕ್ಕೆ ಮತ್ತೆ ಮರುಜೀವ ಸಿಕ್ಕಿದೆ. ವಿದ್ಯಾರ್ಥಿಗಳನ್ನ ಪ್ರಶ್ನೆ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಆಂತರಿಕ ತನಿಖೆ ನಡೆಸಲಾಗುತ್ತಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಹೇಳಿದೆ.
ಕಳೆದ ಶುಕ್ರವಾರ ನಡೆದ ಕೋರ್ಟ್ ವಿಚಾರಣೆಯಲ್ಲಿ ಬೀದರ್ನ ಶಾಹೀನ್ ಶಾಲೆಯಲ್ಲಿ ಸಿಎಎ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಅಪ್ರಾಪ್ತ ಮಕ್ಕಳನ್ನು ವಿಚಾರಣೆ ನಡೆಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಆಂತರಿಕ ತನಿಖೆ ನಡೆಸಲು ಸರ್ಕಾರ ಸೂಚಿಸಿದೆ ಎಂದು ಸರ್ಕಾರಿ ಪರ ವಕೀಲರು, ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ಪೀಠಕ್ಕೆ ತಿಳಿಸಿದರು. ಬಳಿಕ ಈ ಪ್ರಕರಣದ ವಿಚಾರಣೆಯನ್ನು ಅಕ್ಟೊಬರ್ 22ಕ್ಕೆ ಮುಂದೂಡಲಾಗಿದೆ.
ಆಗಸ್ಟ್ 16ರಂದು ಅಪ್ರಾಪ್ತ ಮಕ್ಕಳ ಹಕ್ಕುಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ತಿಳಿದಿರಬೇಕು ಎಂದು ಹೈಕೋರ್ಟ್ ಹೇಳಿತ್ತು. ವಿಚಾರಣೆ ಸಂದರ್ಭದಲ್ಲಿ ವಿಭಾಗೀಯ ಪೀಠ ಪೊಲೀಸ್ ಅಧಿಕಾರಿಗಳು ಮಕ್ಕಳ ವಿಚಾರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಗನ್ ಜೊತೆ ನಾಲ್ಕು ಅಧಿಕಾರಿಗಳು ಪೊಲೀಸ್ ಸಮವಸ್ತ್ರದ ಜತೆ ಕಾಣಿಸಿದ್ದಾರೆ.