ಬೆಂಗಳೂರು: ಡ್ರಗ್ಸ್ ಜಾಲ ವಿಸ್ತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಅಲರ್ಟ್ ಆಗಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.
ಡ್ರಗ್ಸ್ ಜಾಲ ವಿಸ್ತರಣೆ ಹಿನ್ನೆಲೆ: ಹೊರ ರಾಜ್ಯಗಳಿಂದ ಬರುವ ಬಸ್ಗಳ ತಪಾಸಣೆ - ಬೆಂಗಳೂರಿನಲ್ಲಿ ಡ್ರಗ್ ದಂಧೆ
ಡ್ರಗ್ಸ್ ಜಾಲ ವಿಸ್ತರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಶ್ವಾನ ದಳ, ಸಿಸಿಬಿ ನಾರ್ಕೋಟಿಕ್ಸ್ ವಿಂಗ್ ಹಾಗೂ ವಿಶೇಷ ಪೊಲೀಸರ ತಂಡ ರಚನೆ ಮಾಡಿ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಆಗಮಿಸುವ ಬಸ್ಗಳ ತಪಾಸಣೆ ನಡೆಸಲಾಗುತ್ತಿದೆ.

ಬಸ್ಗಳ ತಪಾಸಣೆ ನಡೆಸುತ್ತಿರುವ ಶ್ವಾನ ದಳ
ಪೊಲೀಸ್ ಶ್ವಾನ ದಳ, ಸಿಸಿಬಿ ನಾರ್ಕೋಟಿಕ್ಸ್ ವಿಂಗ್ ಹಾಗೂ ವಿಶೇಷ ಪೊಲೀಸರ ತಂಡ ರಚನೆ ಮಾಡಿ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಬರುವ ಬಸ್ಗಳ ತಪಾಸಣೆ ಮಾಡಲಾಗುತ್ತಿದೆ.
ಹಗಲು-ಇರುಳು ಬಸ್ಗಳನ್ನು ತಡೆದು ತಪಾಸಣೆ ನಡೆಸುತ್ತಿದ್ದಾರೆ. ಮಾದಕ ವಸ್ತು ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ಪಣ ತೊಟ್ಟಿರುವ ಸರ್ಕಾರಕ್ಕೆ ಇದೀಗ ಈ ಪ್ರಕರಣಗಳು ತಲೆನೋವಾಗಿ ಪರಿಣಮಿಸಿದೆ.