ಬೆಂಗಳೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿ ಘೋಷಣೆ ಮಾಡಿರುವ ಎಂ.ಎಸ್ ಧೋನಿ ಸಾಧನೆ ಕೊಂಡಾಡಿರುವ ಕಾಂಗ್ರೆಸ್ ಮುಖಂಡ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದು, ಮಹೇಂದ್ರ ಸಿಂಗ್ ಧೋನಿ ಅವರೇ ಕ್ರಿಕೆಟ್ ಅಂಗಳದಿಂದ ನಿಮ್ಮ ನಿವೃತ್ತಿ ಘೋಷಣೆ ನಮ್ಮೆಲ್ಲರ ಮನದ ಅಂಗಳವನ್ನೂ ಖಾಲಿಯಾಗಿಸಿದೆ. ನೀವು ಕ್ರಿಕೆಟ್ ಜಗತ್ತಿಗೆ ಕೊಟ್ಟಿರುವ ಕೊಡುಗೆ ಅನನ್ಯ ಮತ್ತು ಅಪಾರ ಎಂದಿದ್ದಾರೆ.