ಬೆಂಗಳೂರು: ಕಳೆದ ಹಲವು ದಿನಗಳಿಂದ ನವೆಂಬರ್ ವೇಳೆಗೆ ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಬರುತ್ತೆ ಅಂತ ತಜ್ಞರು ನೀಡಿದ್ದ ಮಾಹಿತಿ ಎಲ್ಲರನ್ನ ಬೆಚ್ಚಿ ಬೀಳಿಸಿತ್ತು. ಆದ್ರೀಗ ಇದೇ ತಜ್ಞರು ರಾಜ್ಯಕ್ಕೆ ಕೋವಿಡ್ ಭಯ ಇಲ್ಲ ಎನ್ನುವ ಮಾಹಿತಿ ನೀಡಿದ್ದು, ಜನರು ನಿಟ್ಟುಸಿರುವ ಬಿಡುವಂತಾಗಿದೆ.
ಈ ಹಿಂದೆ ನವೆಂಬರ್ಗೆ ಮೂರನೇ ಅಲೆ ಬರುತ್ತೆ ಅಂತ ತಜ್ಞರು ಹೇಳಿದ್ದರು. ಆದರೆ, ಇದೀಗ ಎಂದಿನಂತೆ ಶಾಲಾ ಕಾಲೇಜುಗಳು ಪ್ರಾರಂಭವಾಗಿವೆ. ಇದೇ 25 ರಿಂದ 1 ರಿಂದ 5 ನೇ ತರಗತಿ ಶಾಲೆ ಪ್ರಾರಂಭಕ್ಕೆ ತಜ್ಞರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅಕ್ಟೋಬರ್ ವೇಳೆಗೆ ಕೊರೊನಾ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಜೊತೆಗೆ ಹೊಸ ರೂಪಾಂತರಿಗಳು ಸಹ ಪತ್ತೆಯಾಗ್ತಿಲ್ಲ.