ಕರ್ನಾಟಕ

karnataka

ಉತ್ತರ ಒಳನಾಡಿನಲ್ಲಿ ಮಾನ್ಸೂನ್ ಚುರುಕು ; ವಿವಿಧೆಡೆ ಯಲ್ಲೋ, ಆರೇಂಜ್ ಅಲರ್ಟ್ ಘೋಷಣೆ

By

Published : Sep 15, 2020, 4:23 PM IST

ರಾಜ್ಯದ ಹಲವೆಡೆ ಮಳೆ ಜೋರಾಗಿದೆ. ಕರಾವಳಿ ಜಿಲ್ಲೆಗಳು ಸೇರಿ ಉತ್ತರ ಒಳನಾಡಿನಲ್ಲಿ ಮಾನ್ಸೂನ್​ ಚುರುಕಾಗಿದೆ. ಈ ಹಿನ್ನೆಲೆ ಹವಾಮಾನ ಇಲಾಖೆ ಯಲ್ಲೋ, ಆರೇಂಜ್ ಅಲರ್ಟ್ ನೀಡಿದೆ..

Extreme rainfall in coastal districts today
ಸಂಗ್ರಹ ಚಿತ್ರ

ಬೆಂಗಳೂರು :ಇಂದು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಒಳನಾಡಿನಲ್ಲಿ ಬಹುತೇಕ ಎಲ್ಲೆಡೆ ಮಳೆ ಸುರಿದಿದೆ. ಉತ್ತರ ಒಳನಾಡಿನಲ್ಲಿಯೂ ಮಾನ್ಸೂನ್​ ಚುರುಕಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ಕರಾವಳಿ ಜಿಲ್ಲೆಗಳಲ್ಲಿ ಸೆ.19ರವರೆಗೂ ವ್ಯಾಪಕ ಮಳೆಯಾಗಲಿದೆ. ಸೆ. 16-17ರಂದು ಯಲ್ಲೋ ಅಲರ್ಟ್, ಸೆ.18-19ರಂದು ಮಳೆ ಪ್ರಮಾಣ ಏರಿಕೆಯಾಗಲಿದ್ದು, ಆರೇಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನಲ್ಲಿಯೂ ಸೆ. 19ರವರೆಗೆ ವಿವಿಧೆಡೆ ಮಳೆಯಾಗಲಿದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕ ಸಿ ಎಸ್ ಪಾಟೀಲ್

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಇಂದು 15ರಂದು ಆರೇಂಜ್ ಅಲರ್ಟ್​ ನೀಡಲಾಗಿದೆ. ಸೆ.16ರಿಂದ 19ರವರೆಗೆ ಯಲ್ಲೋ ಅಲರ್ಟ್​ ಕೊಡಲಾಗಿದೆ.

ಒಳನಾಡಿನಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಸೆ. 18-19ರಂದು ಭಾರಿ ಮಳೆ ನಿರೀಕ್ಷೆ ಇರುವುದರಿಂದ ಯಲ್ಲೋ ಅಲರ್ಟ್​ ಕೊಡಲಾಗಿದೆ. ಹಾಗೆಯೇ ಬೆಂಗಳೂರಿನಲ್ಲಿ ಸೆ. 16-17ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಸಿ ಎಸ್ ಪಾಟೀಲ್ ತಿಳಿಸಿದ್ದಾರೆ.

ABOUT THE AUTHOR

...view details