ಕರ್ನಾಟಕ

karnataka

ಪುನೀತ್ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಮಾಡಿ ಕೊಡಲಾಗುವುದು : ಸಚಿವ ಗೋಪಾಲಯ್ಯ

By

Published : Nov 2, 2021, 4:25 PM IST

ಪುನೀತ್ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡುವ ಕುರಿತು ಅಧಿಕಾರಿಗಳು ನಿರ್ಧಾರ ಮಾಡಲಿದ್ದಾರೆ. ದೂರದ ಊರಿನಿಂದ ಆಗಮಿಸುವ ಪುನೀತ್ ಅಭಿಮಾನಿಗಳಿಗೆ ಅವಕಾಶ ಮಾಡಿ ಕೊಡುವುದು ನಮ್ಮ ಕರ್ತವ್ಯವಾಗಿದೆ. ಅದನ್ನು ಅಧಿಕಾರಿಗಳು ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ರು..

fans can see puneeth rajkumar grave says minister gopalaiah
ಪುನೀತ್ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಸಿಗಲಿದೆ ಎಂದ ಸಚಿವರು

ಬೆಂಗಳೂರು :ಪುನೀತ್ ರಾಜ್​ಕುಮಾರ್​​ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಮಾಡಿಕೊಡಲಾಗುವುದು ಎಂದು ಅಬಕಾರಿ ಸಚಿವ ಕೆ ಗೋಪಾಲಯ್ಯ ಹೇಳಿದರು.

ಕಂಠೀರವ ಸ್ಟುಡಿಯೋದಲ್ಲಿಂದು ಪುನೀತ್ ರಾಜ್​​ಕುಮಾರ್ ಅವರ ಸಮಾಧಿಗೆ ಕುಟುಂಬ ವರ್ಗ ಹಾಲು-ತುಪ್ಪ ಅರ್ಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನಾಡಿನ ಜನ ಬೆಲೆ ಕಟ್ಟಲಾಗದ ವಸ್ತು ಕಳೆದುಕೊಂಡಿದ್ದೇವೆ. 11ನೇ ದಿನಕ್ಕೆ ಪುನೀತ್ ಸ್ಮರಣೋತ್ಸವ ಕಾರ್ಯಕ್ರಮ ನಡೆಸಲು ಕುಟುಂಬದವರು ತೀರ್ಮಾನ ಮಾಡಿದ್ದಾರೆ ಎಂದರು.

ಪುನೀತ್ ಸಮಾಧಿ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಸಿಗಲಿದೆ ಎಂದ ಸಚಿವರು

ಪುನೀತ್ ಸಮಾಧಿ ದರ್ಶನಕ್ಕೆ ಅವಕಾಶ ಮಾಡಿಕೊಡುವ ಕುರಿತು ಅಧಿಕಾರಿಗಳು ನಿರ್ಧಾರ ಮಾಡಲಿದ್ದಾರೆ. ದೂರದ ಊರಿನಿಂದ ಆಗಮಿಸುವ ಪುನೀತ್ ಅಭಿಮಾನಿಗಳಿಗೆ ಅವಕಾಶ ಮಾಡಿ ಕೊಡುವುದು ನಮ್ಮ ಕರ್ತವ್ಯವಾಗಿದೆ. ಅದನ್ನು ಅಧಿಕಾರಿಗಳು ನಿರ್ವಹಿಸಲಿದ್ದಾರೆ ಎಂದು ತಿಳಿಸಿದ್ರು.

ಇದನ್ನೂ ಓದಿ:ಪುನೀತ್ ರಾಜ್‍ಕುಮಾರ್ ಸಮಾಧಿಗೆ ಹಾಲು-ತುಪ್ಪ ಕಾರ್ಯ; ಕುಟುಂಬಸ್ಥರು ಭಾಗಿ - ವಿಡಿಯೋ

ABOUT THE AUTHOR

...view details