ಕರ್ನಾಟಕ

karnataka

ETV Bharat / state

ಮುಕ್ತ ಆರ್ಥಿಕ ಒಪ್ಪಂದಕ್ಕೆ ಕೇಂದ್ರದ ನಿರ್ಧಾರ.. ಹಾಲು ಉತ್ಪಾದಕರ ಸಂಘಟನೆಗಳಿಂದ ಪ್ರತಿಭಟನೆ - Farmers protest in banglore

ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಆಮದು ಶುಲ್ಕ ರದ್ದು ಪಡಿಸುವ  ಮುಕ್ತ ಆರ್ಥಿಕ ಒಪ್ಪಂದ ವಿರೋಧಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ರೈತರು, ಹಾಲು ಉತ್ಪಾದಕರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಮುಕ್ತ ಆರ್ಥಿಕ ಒಪ್ಪಂದಕ್ಕೆ ಕೇಂದ್ರದ ನಿರ್ಧಾರ: ಹಾಲು ಉತ್ಪಾದಕರ ಸಂಘಟನೆಗಳಿಂದ ಪ್ರತಿಭಟನೆ

By

Published : Nov 3, 2019, 8:35 AM IST

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ಮೇಲೆ ಆಮದು ಶುಲ್ಕ ರದ್ದು ಪಡಿಸುವ ಮುಕ್ತ ಆರ್ಥಿಕ ಒಪ್ಪಂದ ವಿರೋಧಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ರೈತರು ಹಾಗೂ ಹಾಲು ಉತ್ಪಾದಕರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.

ಮುಕ್ತ ಆರ್ಥಿಕ ಒಪ್ಪಂದಕ್ಕೆ ಕೇಂದ್ರದ ನಿರ್ಧಾರ.. ಹಾಲು ಉತ್ಪಾದಕರ ಸಂಘಟನೆಗಳಿಂದ ಪ್ರತಿಭಟನೆ..

ಈ ವೇಳೆ ಬೆಂಗಳೂರು ನಗರ, ಗ್ರಾಮಾಂತರ ಹಾಗೂ ರಾಮನಗರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿ, ರಾಜ್ಯದ ಹಾಲು ಉತ್ಪಾದಕರು ಹಾಗೂ ರೈತರ ಜೀವನವನ್ನು ದುಸ್ಥಿತಿಗೆ ತಳ್ಳುವ ಒಪ್ಪಂದ ಇದಾಗಿದೆ. ಈ ಒಪ್ಪಂದದ ವಿರುದ್ದ ನಾವು ಈಗಾಗಲೇ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ಸಲ್ಲಿಸಿದ್ದೇವೆ. ಇಂದು ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸುತ್ತಿದ್ದು, ನವೆಂಬರ್‌ 4 ರಂದು ಈ ಒಪ್ಪಂದಕ್ಕೆ ಸಹಿ ಹಾಕಿದ ಪಕ್ಷದಲ್ಲಿ ರಾಜ್ಯದಲ್ಲಿ ಉಗ್ರ ಹೋರಾಟ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ನವೆಂಬರ್‌ 4ರಂದು ಈ ಕಾಯ್ದೆಗೆ ಸಹಿ ಹಾಕುವ ಮೂಲಕ ವಿದೇಶದಲ್ಲಿ ನೀವು ಚಪ್ಪಾಳೆ ತಟ್ಟಿಸಿಕೊಳ್ಳಬಹುದು. ಆದರೆ, ಮುಂದಿನ ದಿನಗಳಲ್ಲಿ ಈ ದೇಶದ ಜನರ ಸಿಟ್ಟಿಗೆ ಗುರಿಯಾಗುತ್ತೀರಿ. ದಿನ ಬೆಳಗ್ಗೆ ಎದ್ದು ಕಷ್ಟ ಪಟ್ಟು ಡೈರಿಗೆ ಹಾಕುವ ಕಷ್ಟದ ಕೈಗಳಿಗೆ ನೀವು ವಿಷ ನೀಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರ ಬಗ್ಗೆ ರಾಜ್ಯ ಸರ್ಕಾರ ಧ್ವನಿ ಎತ್ತಬೇಕು. ರಾಜ್ಯ ಸರ್ಕಾರ ವಿರೋಧ ಪಕ್ಷದ ನಾಯಕರನ್ನು ಕರೆದುಕೊಂಡು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕು. ಈ ಬಗ್ಗೆ ಮುಂದಿನ ಸಂಸತ್ತಿನ ಅಧಿವೇಶನದಲ್ಲಿ ಧ್ವನಿ ಎತ್ತಲಿದ್ದೇವೆ ಎಂದರು.

ಪ್ರತಿಭಟನೆಯಲ್ಲಿ ಬಮೂಲ್​ನ ನಿರ್ದೇಶಕರುಗಳಾದ ಹರೀಶ್‌ ಕುಮಾರ್‌, ಕೇಶವಮೂರ್ತಿ ಸೇರಿ ಮತ್ತಿತರರು ಪಾಲ್ಗೊಂಡಿದ್ದರು. ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಹಾಲು ಉತ್ಪಾದಕರು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ABOUT THE AUTHOR

...view details