ಬೆಂಗಳೂರು:ವಿಧಾನಪರಿಷತ್ ಚುನಾವಣೆಗೆ ಬೆಂಗಳೂರು ನಗರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ (ಕೆಜಿಎಫ್ ಬಾಬು) ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯಲಹಂಕದ ತಹಶಿಲ್ದಾರ್ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.
ಕೆಜಿಎಫ್ ಬಾಬು, ನನ್ನನ್ನು ಗೆಲ್ಲಿಸಿದರೆ 5 ಸಾವಿರ, 10 ಸಾವಿರ, 50 ಸಾವಿರ ಹಾಗೂ ಒಂದು ಲಕ್ಷ ಜೀವ ವಿಮೆ ಲೆಕ್ಕದಲ್ಲಿ ತಲಾ 5 ಲಕ್ಷ ರೂ. ಹಣ ಕೊಡುವುದಾಗಿ ಬಹಿರಂಗವಾಗಿ ಮತದಾರರಿಗೆ ಹೇಳುತ್ತಿದ್ದಾರೆ. ಈ ಮೂಲಕ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತಿರುವುದಾಗಿ ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.
ಅಲ್ಲದೆ, ವಿಧಾನಪರಿಷತ್ನ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್(ಕೆಜಿಎಫ್ ಬಾಬು) ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಆರ್ಟಿಎ ಕಾರ್ಯಕರ್ತ ಎ. ಆಲಂ ಪಾಷ ಎಂಬುವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಕ್ಕೆ ದೂರು ನೀಡಿದ್ದಾರೆ.