ಕರ್ನಾಟಕ

karnataka

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು: ಕೊಲೆ ಆರೋಪಿ ಕಾಲಿಗೆ ಗುಂಡೇಟು

ಶ್ರೀನಿವಾಸ್ ಅಲಿಯಾಸ್ ಕರಿ ಸೀನಾ ಕೊಲೆ ಪ್ರಕರಣದ ಆರೋಪಿ ಸಂತೋಷ್ ಬಂಧನಕ್ಕೆ ತೆರಳಿದ್ದ ವೇಳೆ ಫೈರಿಂಗ್​ ನಡೆದಿದೆ. ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಸಂತೋಷ್ ಕಾಲಿಗೆ ಗುಂಡು ಹಾರಿಸಲಾಗಿದೆ.

By

Published : Feb 9, 2021, 9:43 AM IST

Published : Feb 9, 2021, 9:43 AM IST

Firing on accused santhosh by bangalore City Police
ಸಿಲಿಕಾನ್ ಸಿಟಿ ಪೊಲೀಸರಿಂದ ಫೈರಿಂಗ್: ಕೊಲೆ ಆರೋಪಿ ಕಾಲಿಗೆ ಗುಂಡು ...!

ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ಕೊಲೆ ಆರೋಪಿಯ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿ ಸಂತೋಷ್(21) ಕಾಲಿಗೆ ಗುಂಡು ತಗುಲಿದೆ.

ಆರೋಪಿ ಸಂತೋಷ್(21) ಕಾಲಿಗೆ ಗುಂಡು

ರಾಜಗೋಪಾಲನಗರದ ಜಿ.ಕೆ. ಡಬ್ಲ್ಯೂ ಲೇಔಟ್​ನಲ್ಲಿ ಫೈರಿಂಗ್ ನಡೆದಿದ್ದು, ಸಂತೋಷ್​​​ ಅದೇ ಬಡಾವಣೆಯ ರೌಡಿಶೀಟರ್ ಆಗಿದ್ದ ಎಂದು ತಿಳಿದು ಬಂದಿದೆ. ಇದೇ ಜ. 9ರಂದು ಶ್ರೀನಿವಾಸ್ ಅಲಿಯಾಸ್ ಕರಿ ಸೀನನ ಕೊಲೆ ನಡೆದಿದ್ದು, ಸಂತೋಷ್​​ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಹಾಡಹಹಗಲೇ ರಾಜಗೋಪಾಲನಗರದ ಕಸ್ತೂರಿ ನಗರದಲ್ಲಿ ಆರೋಪಿಗಳು ಹತ್ಯೆಗೈದಿದ್ದರು.

ಈ ಸುದ್ದಿಯನ್ನೂ ಓದಿ:ಟ್ರಕ್​​ ಮತ್ತು ಪಿಕ್​ ಅಪ್​ ವಾಹನ ಮುಖಾಮುಖಿ ಡಿಕ್ಕಿ: 6 ಮಂದಿ ದುರ್ಮರಣ

ಕೊಲೆ ಪ್ರಕರಣದ ಆರೋಪಿ ಸಂತೋಷ್ ಬಂಧನಕ್ಕೆ ತೆರಳಿದ್ದ ವೇಳೆ ಫೈರಿಂಗ್​ ನಡೆದಿದೆ. ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಸಂತೋಷ್ ಕಾಲಿಗೆ ಗುಂಡು ಹಾರಿಸಲಾಗಿದೆ. ಪಿಎಸ್ಐ ಹನುಮಂತ ಹಾದಿಮನಿ ಅವರು ಗುಂಡು ಹಾರಿಸಿದ್ದಾರೆ.

ABOUT THE AUTHOR

...view details