ಬೆಂಗಳೂರು: ಬಿಟಿಎಂ ವಿಧಾನಸಭಾ ಕ್ಷೇತ್ರದ ಲಕ್ಕಸಂದ್ರ ವಾರ್ಡ್ನಲ್ಲಿಂದು ಕೊರೊನಾ ಸಂತ್ರಸ್ತರಿಗೆ ಉಚಿತವಾಗಿ ಆಹಾರ ಪದಾರ್ಥಗಳನ್ನು ವಿತರಿಸಲಾಯಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪಾಲ್ಗೊಂಡಿದ್ದು, ಸಾವಿರಾರು ಜನರಿಗೆ ದಿನನಿತ್ಯದ ಅಗತ್ಯ ಆಹಾರ ಪದಾರ್ಥಗಳನ್ನು ವಿತರಣೆ ಮಾಡಿದರು.
ಈ ಸಂದರ್ಭ ಮಾತನಾಡಿದ ಈಶ್ವರ್ ಖಂಡ್ರೆ, ಕಳೆದ ವರ್ಷ ಐವತ್ತು ಸಾವಿರಕ್ಕೂ ಹೆಚ್ಚು ಜನರಿಗೆ ನಿತ್ಯ ಉಪಹಾರವನ್ನು ವಿತರಿಸುತ್ತಿದ್ದರು. 60,000 ಆಹಾರ ಪದಾರ್ಥಗಳ ಕಿಟ್ಗಳನ್ನು ವಿತರಿಸಿದ್ದಾರೆ. ಈ ಬಾರಿಯೂ ಈಗಾಗಲೇ 30 ಸಾವಿರಕ್ಕೂ ಅಧಿಕ ಕಿಟ್ಗಳನ್ನು ವಿತರಿಸಿದ್ದಾರೆ ರಾಮಲಿಂಗಾರೆಡ್ಡಿ ಕಾರ್ಯವನ್ನು ಶ್ಲಾಘಿಸಿದರು.