ಕರ್ನಾಟಕ

karnataka

ETV Bharat / state

ಕೊರೊನಾ ನಿಯಂತ್ರಣ: ಪ್ರಕೃತಿ ವಿಕೋಪ ನಿಧಿಯಿಂದ ಡಿಸಿಗಳಿಗೆ 86.25 ಕೋಟಿ ರೂ. ಬಿಡುಗಡೆ - 86.25 crore to the DC from the Natural Disaster Fund

ಕೊರೊನಾ ವೈರಸ್​ ನಿಯಂತ್ರಣಕ್ಕಾಗಿ ಪ್ರಕೃತಿ ವಿಕೋಪ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ 86.25 ಕೋಟಿ ರೂ. ಬಿಡುಗಡೆ ಮಾಡಿದೆ.

ರಾಜ್ಯ ಸರ್ಕಾರ
ರಾಜ್ಯ ಸರ್ಕಾರ

By

Published : Apr 29, 2020, 11:52 PM IST

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಪ್ರಕೃತಿ ವಿಕೋಪ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರದಿಂದ 86.25 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.

ಪ್ರಕೃತಿ ವಿಕೋಪ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ 86.25 ಕೋಟಿ ರೂ. ಬಿಡುಗಡೆ

ಕೊರೊನಾವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಕೇಂದ್ರೀಯ ಗೃಹ ಮಂತ್ರಾಲಯವು ಮಾರ್ಗಸೂಚಿ/ಆದೇಶಗಳನ್ನು ಹೊರಡಿಸಿದೆ. ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ/ಆದೇಶಗಳನುಸಾರ ಕರ್ನಾಟಕ ರಾಜ್ಯ ಸರ್ಕಾರವು ಈ ಆದೇಶ ಹೊರಡಿಸಿದೆ. ಇದು ಏ.23 ರಿಂದ ಈ ಆದೇಶ ಜಾರಿಗೆ ಬಂದಿದೆ.

ಪ್ರಕೃತಿ ವಿಕೋಪ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ 86.25 ಕೋಟಿ ರೂ. ಬಿಡುಗಡೆ

ಅನುದಾನದ ಅವಶ್ಯಕತೆಯ ಮಾಹಿತಿಯನ್ನು ಗೂಗಲ್ ಸ್ಪ್ರೆಡ್ ಶೀಟ್ ಮೂಲಕ ನಮೂದಿಸಲು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿತ್ತು. ಅದರಂತೆ ಜಿಲ್ಲಾಧಿಕಾರಿಗಳು ಒಟ್ಟು 86.25 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಕೋರಿ ವಿವರಗಳನ್ನು ಸಲ್ಲಿಸಿದ್ದರು. ಸದರಿ ವಿವರಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಮೊತ್ತವನ್ನು ಬಿಡುಗಡೆ ಮಾಡಲು ಸರ್ಕಾರವು ನಿರ್ಧರಿಸಿ ಆದೇಶ ಹೊರಡಿಸಿದೆ. 86.25 ಕೋಟಿ ರೂಪಾಯಿ ಬಿಡುಗಡೆ ಮಾಡಿರುವ ಸರ್ಕಾರ ಇದಕ್ಕೆ ಕೆಲ ಷರತ್ತುಗಳನ್ನು ಕೂಡ ವಿಧಿಸಿದ್ದು ಕೆಳಗಿನಂತಿವೆ.

ಮೇಲಿನಂತೆ ಬಿಡುಗಡೆಯಾದ ಮೊತ್ತವನ್ನು ಕೇಂದ್ರ ಸರ್ಕಾರ ಕೊವಿಡ್​-19 ರೋಗಾಣುವನ್ನು ತಡೆಗಟ್ಟಲು ಹೊರಡಿಸಿರುವ ಮಾರ್ಗಸೂಚಿಯಂತ ವೆಚ್ಚ ಭರಿಸುವುದು.

ಈ ಆದೇಶದಲ್ಲಿ ಬಿಡುಗಡೆ ಮಾಡಿದ ಅನುದಾನವನ್ನು ಯಾವ ಉದ್ದೇಶಕ್ಕಾಗಿ ಬಿಡುಗಡೆ ಮಾಡಲಾಗಿದೆಯೋ ಅದೇ ಉದ್ದೇಶಕ್ಕಾಗಿ ಬಳಸಿಕೊಳ್ಳತಕ್ಕದ್ದು. ಅನುದಾನ ವೆಚ್ಚ ಮಾಡಿದ್ದಕ್ಕೆ ಸಂಬಂಧಿಸಿದಂತೆ ಹಣ ಬಳಕೆ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.

ಹಣ ಬಳಕೆಯಲ್ಲಿ ಯಾವುದೇ ಲೋಪವಾದಲ್ಲಿ ಆಯಾ ಜಿಲ್ಲಾಧಿಕಾರಿಯವರನ್ನೇ ನೇರವಾಗಿ ಜವಾಬ್ದಾರನ್ನಾಗಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

ABOUT THE AUTHOR

...view details