ಕರ್ನಾಟಕ

karnataka

ಸರ್ಕಾರಿ ಕಾಲೇಜಿನಲ್ಲಿ ವಿದೇಶಿ ಭಾಷೆಗಳ ಕಲಿಕಾ ಕೇಂದ್ರ ಆರಂಭ : ಸಚಿವ ಅಶ್ವತ್ಥ್ ನಾರಾಯಣ

ರಾಜ್ಯದಲ್ಲಿರುವ 430 ಸರ್ಕಾರಿ ಪದವಿ ಕಾಲೇಜುಗಳನ್ನು ಸಮಗ್ರವಾಗಿ ಸುಧಾರಿಸಲು ಸರ್ಕಾರ ಪಣತೊಟ್ಟಿದೆ. ಈ ನಿಟ್ಟಿನಲ್ಲಿ ಈಗಾಗಲೇ ಶಿಕ್ಷಣ ಸಂಸ್ಥೆಗಳಲ್ಲಿ ನೂರಕ್ಕೆ ನೂರರಷ್ಟು ಡಿಜಿಟಲ್ ಕಲಿಕೆ ಮತ್ತು ಸ್ಮಾರ್ಟ್ ತರಗತಿಗಳನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ..

By

Published : Dec 3, 2021, 5:31 PM IST

Published : Dec 3, 2021, 5:31 PM IST

Ashwath Narayan in Girls college
ವಿದ್ಯಾರ್ಥಿನಿಯರ ಸನ್ಮಾನಿಸಿದ ಸಚಿವ ಅಶ್ವತ್ಥ್ ನಾರಾಯಣ್

ಬೆಂಗಳೂರು :ಮಲ್ಲೇಶ್ವರದಲ್ಲಿರುವ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಕ್ಯಾಂಪಸ್ ಅನ್ನು ಸದ್ಯದಲ್ಲೇ ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಿ, ಇಲ್ಲಿನ ಪದವಿ ಕಾಲೇಜಿನಲ್ಲಿ ವಿದೇಶಿ ಭಾಷೆಗಳನ್ನು ಕಲಿಯುವ ಸುಸಜ್ಜಿತ ಕೇಂದ್ರವನ್ನು ಆರಂಭಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಮಲ್ಲೇಶ್ವರ 13ನೇ ಅಡ್ಡರಸ್ತೆಯಲ್ಲಿರುವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಭವಿಷ್ಯವನ್ನು ಪರಿಗಣಿಸಿ ಬೆಂಗಳೂರು ವಿವಿ ಜತೆ ಒಡಂಬಡಿಕೆ ಮಾಡಿಕೊಳ್ಳುವ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳನ್ನು ಕೂಡ ಆರಂಭಿಸಲಾಗಿದೆ ಎಂದರು.

ಮಲ್ಲೇಶ್ವರದಲ್ಲಿರುವ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸಚಿವ ಅಶ್ವತ್ಥ್ ನಾರಾಯಣ ಮಾತನಾಡಿರುವುದು..

ರಾಜ್ಯದಲ್ಲಿರುವ 430 ಸರ್ಕಾರಿ ಪದವಿ ಕಾಲೇಜುಗಳನ್ನು ಸಮಗ್ರವಾಗಿ ಸುಧಾರಿಸಲು ಸರ್ಕಾರ ಪಣತೊಟ್ಟಿದೆ. ಈ ನಿಟ್ಟಿನಲ್ಲಿ ಈಗಾಗಲೇ ಶಿಕ್ಷಣ ಸಂಸ್ಥೆಗಳಲ್ಲಿ ನೂರಕ್ಕೆ ನೂರರಷ್ಟು ಡಿಜಿಟಲ್ ಕಲಿಕೆ ಮತ್ತು ಸ್ಮಾರ್ಟ್ ತರಗತಿಗಳನ್ನು ಅಸ್ತಿತ್ವಕ್ಕೆ ತರಲಾಗಿದೆ. ಈ ಮೂಲಕ ವಿದ್ಯಾರ್ಥಿಗಳನ್ನು ಬಹುಮುಖ ಪ್ರತಿಭಾವಂತರನ್ನಾಗಿ ಮಾಡಲಾಗುತ್ತಿದೆ ಎಂದರು.

ವಿದ್ಯಾರ್ಥಿಗಳು ಅಡ್ಡದಾರಿ ಹಿಡಿಯಬಾರದು

ಜತೆಗೆ ಸರ್ಕಾರವು ಇನ್ಫೋಸಿಸ್, ಮಹೀಂದ್ರ & ಮಹೀಂದ್ರ, ನಾಸ್ಕಾಂ ಮುಂತಾದ ದೈತ್ಯ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಆಯಾಯ ಕಾಲೇಜಿಗೆ ಬೇಕಾದ ಮೈಕ್ರೋಸೈಟ್​​ಗಳನ್ನು ಅಭಿವೃದ್ಧಿಪಡಿಸಲಾಗಿದೆ. ವಿದ್ಯಾರ್ಥಿಗಳು ಸಾಧನೆ ಮಾಡುವ ಅವಸರದಲ್ಲಿ ಅಡ್ಡದಾರಿ ಹಿಡಿಯಬಾರದು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಸಮಾರಂಭದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀರಾಮ್, ಪ್ರಾಂಶುಪಾಲ ರವಿ, ಉಪಪ್ರಾಂಶುಪಾಲ ರವಿಶಂಕರ್, ಸಮಾಜಸೇವಕ ವೀರಣ್ಣಗೌಡ, ಹೆಚ್.ವಿ ನಂಜುಂಡಯ್ಯನವರ ಮೊಮ್ಮಗ ಮತ್ತು ತಂತ್ರಜ್ಞಾನ ಪರಿಣತ ರಾಮಸ್ವಾಮಿ ಮುಂತಾದವರು ಉಪಸ್ಥಿತರಿದ್ದರು. ಇದೇ ವೇಳೆ ಕಳೆದ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.


ವಿದ್ಯಾರ್ಥಿ ವೇತನಕ್ಕೆ 10 ಲಕ್ಷ ರೂ. ಕೊಡುಗೆ

ಇದೇ ಸಂದರ್ಭದಲ್ಲಿ ರಾಮಸ್ವಾಮಿಯವರು ವಿದ್ಯಾರ್ಥಿನಿಯರ ವಿದ್ಯಾರ್ಥಿ ವೇತನಕ್ಕೆಂದು ಕಾಲೇಜಿಗೆ 10 ಲಕ್ಷ ರೂ.ಗಳನ್ನು ಕೊಡುಗೆಯಾಗಿ ನೀಡಿದರು. ಇದಕ್ಕಾಗಿ ಅವರನ್ನು ಅಭಿನಂದಿಸಿದ ಸಚಿವರು, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟವಿಲ್ಲವೆಂದು ಯಾರೂ ಹೇಳುವಂತಿಲ್ಲ. ಸಮಾಜದಲ್ಲಿರುವ ಪ್ರತಿಭಾವಂತರೆಲ್ಲ ಸರ್ಕಾರಿ ಕಾಲೇಜುಗಳಲ್ಲಿ ಓದಿದವರೇ ಆಗಿದ್ದಾರೆ.

ರಾಮಸ್ವಾಮಿಯವರು ಕೂಡ ಪಕ್ಕದಲ್ಲಿರುವ ಕೋದಂಡರಾಮಪುರ ಸರ್ಕಾರಿ ಹೈಸ್ಕೂಲಿನಲ್ಲೇ ಓದಿದವರು. ಬಾಲಕಿಯರ ಪದವಿಪೂರ್ವ ಕಾಲೇಜು ಕೂಡ ಮೈಸೂರು ಮಹಾರಾಜರ ಕೊಡುಗೆಯೇ ಆಗಿದೆ. ಇದರೊಂದಿಗೂ ಇವರು ನಿಕಟ ಸಂಪರ್ಕ ಹೊಂದಿರುವುದು ಅಭಿಮಾನದ ಸಂಗತಿ ಎಂದು ಮೆಚ್ಚುಗೆ ವ್ಯಕ್ತಡಿಸಿದರು.

ಇದನ್ನೂ ಓದಿ:ದ. ಆಫ್ರಿಕಾದಿಂದ ಬಂದ ಕೆಲ ಪ್ರಯಾಣಿಕರು ನಾಪತ್ತೆ : ಸಚಿವ ಸುಧಾಕರ್

ABOUT THE AUTHOR

...view details