ಬೆಂಗಳೂರು:ರಾಜ್ಯದಲ್ಲಿ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಬೆಲೆ ಕುಸಿದಾಗ ಅವುಗಳಿಗೆ ಬೆಂಬಲ ಬೆಲೆ ನಿಗದಿಪಡಿಸಲು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚನೆ ಮಾಡಲಾಗಿದೆ.
ಟೊಮೆಟೊ, ಭತ್ತ, ರಾಗಿ, ಮೆಕ್ಕೆಜೋಳ, ತೆಂಗಿನಕಾಯಿ, ಈರುಳ್ಳಿ, ತೊಗರಿ ಸೇರಿದಂತೆ ಹಲವಾರು ಬೆಳೆಗಳ ಬೆಲೆ ಮಾರುಕಟ್ಟೆಯಲ್ಲಿ ಕುಸಿದಾಗ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಈ ಸಮಿತಿ ಸಹಾಯ ಮಾಡಲಿದೆ.