ಕರ್ನಾಟಕ

karnataka

ETV Bharat / state

ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆ, ಎಲೆ ಚುಕ್ಕೆ ರೋಗಕ್ಕೆ ಪರಿಹಾರ: ಕೇಂದ್ರಕ್ಕೆ ಬಿಎಸ್ವೈ ಮನವಿ - ಈಟಿವಿ ಭಾರತ ಕನ್ನಡ

ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಮತ್ತು ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದ ಸಂತ್ರಸ್ತರಾದ ರೈತರಿಗೆ ಪರಿಹಾರ ನೀಡುವ ಬಗ್ಗೆ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಭೇಟಿ ಮಾಡಿ ಮನವಿ ಸಲ್ಲಿಸಿದರು.

former-cm-yadiyurappa-met-central-minister-narendra-singh-thomar
ಅಡಿಕೆ ಸಂಶೋಧನಾ ಕೇಂದ್ರ ಸ್ಥಾಪನೆ, ಎಲೆ ಚುಕ್ಕೆ ರೋಗಕ್ಕೆ ಪರಿಹಾರ : ಕೇಂದ್ರಕ್ಕೆ ಬಿಎಸ್ವೈ ಮನವಿ

By

Published : Oct 19, 2022, 10:55 PM IST

ಬೆಂಗಳೂರು: ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಮತ್ತು ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗದಿಂದ ಸಂತ್ರಸ್ತ ರೈತರಿಗೆ ಪರಿಹಾರ ನೀಡುವಂತೆ ಕೇಂದ್ರ ಕೃಷಿ, ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಗೆ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಬಿ.ಎಸ್.ಯಡಿಯೂರಪ್ಪ ಇಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಧಿಗಳ ನಿಯೋಗದೊಂದಿಗೆ ಕೇಂದ್ರ ಕೃಷಿ, ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿ ಮಾಡಿದರು. ಕರ್ನಾಟಕದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪನೆ ಮತ್ತು ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದ ಸಂತ್ರಸ್ತ ರೈತರಿಗೆ ಪರಿಹಾರ ನೀಡುವ ಕುರಿತಂತೆ ಮಾತುಕತೆ ನಡೆಸಿದರು.

ಅಡಿಕೆ ಬೆಳೆ ಸಮಸ್ಯೆ ಬಗ್ಗೆ ವಿಸ್ತೃತ ಮಾಹಿತಿ: ಈ ವೇಳೆ ಸಮಸ್ಯೆ ಬಗ್ಗೆ ವಿಸ್ತೃತ ಮಾಹಿತಿ ನೀಡಿದ ನಿಯೋಗ ದೇಶದಲ್ಲಿ ಸುಮಾರು 12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತದೆ. ದೇಶದಾದ್ಯಂತ ಸುಮಾರು 12 ಲಕ್ಷ ಟನ್‌ಗಳಷ್ಟು ಉತ್ಪಾದನೆಯೊಂದಿಗೆ ಸುಮಾರು ರೂ. 5400 ಕೋಟಿಗಳ ಮೌಲ್ಯವನ್ನು ಹೊಂದಿದೆ. ಕರ್ನಾಟಕ ರಾಜ್ಯವು ಸುಮಾರು 4,300 ಕೋಟಿ ಮೌಲ್ಯದ ಸುಮಾರು 9.5 ಲಕ್ಷ ಟನ್ ಕೊಡುಗೆ ನೀಡುತ್ತದೆ ಹಾಗೂ ಕರ್ನಾಟಕ ರಾಜ್ಯದಲ್ಲಿ ಸುಮಾರು 50 ಲಕ್ಷ ಜನರಿಗೆ ಅಡಿಕೆ ಬೆಳೆಯು ಜೀವನೋಪಾಯವನ್ನು ಒದಗಿಸುತ್ತಿದೆ ಎಂದು ವಿವರಿಸಿದರು.

ಕಳೆದ ಕೆಲವು ವರ್ಷಗಳಿಂದ ಸ್ಥಿರ ಬೆಲೆಯೊಂದಿಗೆ ಸಣ್ಣ ಅಡಿಕೆ ರೈತರೂ ಯೋಗ್ಯ ಜೀವನ ನಡೆಸಲು ಸಾಧ್ಯವಾಯಿತು. ಕಳೆದ ಕೆಲವು ದಿನಗಳಿಂದ ಎಲೆ ಚುಕ್ಕೆ ರೋಗವು ಕಾಳ್ಗಿಚ್ಚಿನಂತೆ ಹರಡುತ್ತಿದೆ ಮತ್ತು ಈಗಾಗಲೇ ಸುಮಾರು 20,000 ಹೆಕ್ಟೇರ್ ಪ್ರದೇಶವನ್ನು ಬಾಧಿಸಿದೆ. ಈ ರೋಗವು ಗಾಳಿಯಲ್ಲಿ ಹರಡುವುದರಿಂದ ಮುಂದಿನ ದಿನಗಳಲ್ಲಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಪ್ರದೇಶಗಳಿಗೆ ರೋಗ ಹರಡುವ ಎಲ್ಲಾ ಸಾಧ್ಯತೆಗಳಿವೆ ಮತ್ತು ಅರೆಕಾ ಬೆಳೆಗಳ ಅಸ್ತಿತ್ವಕ್ಕೆ ಅಪಾಯವಿದೆ.

ಪ್ರಸ್ತುತ ಶಿಫಾರಸು ಮಾಡಲಾದ ಶಿಲೀಂಧ್ರನಾಶಕಗಳನ್ನು ಸಿಂಪಡಿಸುವುದರಿಂದ ರೋಗವನ್ನು ನಿಯಂತ್ರಿಸಲಾಗುತ್ತಿಲ್ಲ. ಇದರಿಂದ ನಷ್ಟ ಭರಿಸಲಾಗದ ರೈತರು ಮನನೊಂದು ಆತ್ಮಹತ್ಯೆಯ ಹಾದಿ ಹಿಡಿಯುತ್ತಿದ್ದಾರೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ದಯಮಾಡಿ ರೋಗವನ್ನು ಅಧ್ಯಯನ ಮಾಡಲು ಮತ್ತು ಪರಿಹಾರ ಕ್ರಮಗಳನ್ನು ಸೂಚಿಸಲು ಕರ್ನಾಟಕಕ್ಕೆ ವಿಜ್ಞಾನಿಗಳ ತಂಡವನ್ನು ನಿಯೋಜಿಸಬೇಕು ಮತ್ತು ಸಂತ್ರಸ್ತ ರೈತರ ನೆರವಿಗಾಗಿ ಹಣಕಾಸಿನ ಪ್ಯಾಕೇಜ್ ಘೋಷಿಸುವಂತೆ ಮನವಿ ಮಾಡಿತು.

ಇದನ್ನೂ ಓದಿ:ದೆಹಲಿಯಲ್ಲಿ ಪ್ರಲ್ಹಾದ್ ಜೋಶಿ ಭೇಟಿಯಾದ ಬಿಎಸ್‌ವೈ: ಸಂಪುಟ ವಿಸ್ತರಣೆ ಸೇರಿ ಹಲವು ಸಂಗತಿಗಳ ಚರ್ಚೆ

ABOUT THE AUTHOR

...view details