ಕರ್ನಾಟಕ

karnataka

By

Published : Dec 6, 2021, 8:48 PM IST

ETV Bharat / state

'ಬಿಜೆಪಿಯ ಭೀಷ್ಮ' ಉರಿಮಜಲು ರಾಮ ಭಟ್​ ನಿಧನ.. ಸಿಎಂ ಬೊಮ್ಮಾಯಿ, ಬಿಎಸ್​​ವೈ ಸಂತಾಪ

ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿದ್ದ ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮಭಟ್ ನಿಧನರಾಗಿದ್ದಾರೆ. ಪುತ್ತೂರು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿದ್ದ ಅವರು, ವಯೋಸಹಜ ಕಾಯಿಲೆಗೆ ತುತ್ತಾಗಿದ್ದರು.

former-mla-urimajalu-ramabhatt-passes-away
'ಬಿಜೆಪಿಯ ಭೀಷ್ಮ' ಉರಿಮಜಲು ರಾಮ ಭಟ್​ ನಿಧನ

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಉರಿಮಜಲು ರಾಮಭಟ್ (92) ಇಂದು ನಿಧನರಾಗಿದ್ದಾರೆ. ಪುತ್ತೂರಿನ ಮಾಜಿ ಶಾಸಕರಾಗಿದ್ದ ಅವರು, ವಯೋಸಹಜ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಬಳಿಕ ಆಸ್ಪತ್ರೆಯಿಂದ ಅವರನ್ನು ಮನೆಗೆ ಕರೆತರಲಾಗಿತ್ತು. ಇಂದು ಅವರು ವಿಧಿವಶರಾಗಿದ್ದಾರೆ.

ಉರಿಮಜಲು ರಾಮ್ ಭಟ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.

ಜನಸಂಘ ಮೂಲದ ನಾಯಕರಾದ ಹಾಗೂ ಮಾಜಿ ಶಾಸಕ ಉರಿಮಜಲು ರಾಮ ಭಟ್ ಅವರು ವಿದಿವಶರಾದ ಸುದ್ದಿ ತಿಳಿದು ನನಗೆ ಅತೀವ ದುಃಖವಾಗಿದೆ ರಾಷ್ಟ್ರ ನಿರ್ಮಾಣದ ಕಾರ್ಯಕ್ಕೆ ತಮ್ಮ ಸರ್ವಸ್ವವನ್ನು ಧಾರೆಯರೆದ ಅವರ ಜೀವನ ಅನುಕರಣೀಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಬಿಜೆಪಿಯ ಭೀಷ್ಮ ಎಂದೇ ಖ್ಯಾತರಾಗಿದ್ದ ಪುತ್ತೂರಿನ ಮಾಜಿ ಶಾಸಕರು, ಆತ್ಮೀಯರೂ ಆದ ಉರಿಮಜಲು ರಾಮಭಟ್ ಅವರು ದೈವಾಧೀನರಾದ ವಿಷಯ ತಿಳಿದು ಅತ್ಯಂತ ದುಃಖವಾಗಿದೆ. ಜನಸಂಘ, ನಂತರ ಬಿಜೆಪಿಯ ಪ್ರಭಾವಿ ನಾಯಕರಾಗಿ, ಶಾಸಕರಾಗಿ, ತಳಮಟ್ಟದಿಂದ ಸಂಘಟನೆ ಕಟ್ಟಿದ್ದರು.

ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು, ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:ಪ್ರತಿಪಕ್ಷವನ್ನು ಎಷ್ಟು ದಿನ ದೂರ ಇಡ್ತೀರಿ?... ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ

For All Latest Updates

TAGGED:

ABOUT THE AUTHOR

...view details