ಬೆಂಗಳೂರು: ನ್ಯಾಯಾಲಯದ ಅಭಿಪ್ರಾಯದಂತೆ ರಾಜ್ಯದಲ್ಲಿ ಸರ್ಕಾರ ಲಾಕ್ಡೌನ್ ಮಾಡಿದೆ. ಆದರೆ, ಈ ಸಮಯದಲ್ಲಿ ಬಡವರಿಗೆ, ಕಾರ್ಮಿಕರಿಗೆ ತೊಂದರೆ ಆಗಬಾರದು ಎಂದು ಮಾಜಿ ಸಂಸದ ಉಗ್ರಪ್ಪ ಆಗ್ರಹಿಸಿದ್ದಾರೆ.
ನಗರದ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಲಾಕ್ಡೌನ್ಗೆ ಕಾಂಗ್ರೆಸ್ನ ವಿರೋಧವಿಲ್ಲ. ನಮ್ಮ ಸಹಕಾರವಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಒಂದಷ್ಟು ಸಲಹೆ ಕೊಡಲಿದೆ. ಲಾಕ್ಡೌನ್ ಅವಧಿಯಲ್ಲಿ ಇಂದಿರಾ ಕ್ಯಾಂಟಿನ್ ಮೂಲಕ ಬಡವರಿಗೆ ಉಚಿತ ಆಹಾರ ವಿತರಣೆ ಮಾಡಬೇಕು. ಅಗತ್ಯವಿರುವ ಬಡವರಿಗೆ, ಬಿಪಿಎಲ್ ಕಾಡ್೯ ಇರೋರಿಗೆ ಕನಿಷ್ಠ ಐದು ಸಾವಿರ ಸಹಾಯಧನವನ್ನು ಸರ್ಕಾರ ಕೊಡಬೇಕು. ರಾಜ್ಯ ಜನರಿಗೆ ಉಚಿತವಾಗಿ ವ್ಯಾಕ್ಸಿನ್ ಕೊಡಬೇಕು. ಈ ಕೆಲಸವನ್ನ ತ್ವರಿತವಾಗಿ ಸರ್ಕಾರ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.