ಕರ್ನಾಟಕ

karnataka

ETV Bharat / state

ದಿವ್ಯಾಂಗ ಮಕ್ಕಳಿಗೆ ಉಚಿತ ಶೈಕ್ಷಣಿಕ ಸಾಮಾಗ್ರಿ: ಹೈಕೋರ್ಟ್‍ಗೆ ಸರ್ಕಾರದ ಮಾಹಿತಿ - Free educational materials to children

ರಾಜ್ಯದ ದಿವ್ಯಾಂಗ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ವರ್ಷದಿಂದ ಬ್ರೈಲ್ ಲಿಪಿಯಲ್ಲಿ ಕಲಿಕಾ ಮತ್ತು ಶೈಕ್ಷಣಿಕ ಸಾಮಾಗ್ರಿಗಳನ್ನು ಉಚಿತವಾಗಿ ಪೂರೈಸಲು ಮತ್ತು ಅವುಗಳನ್ನು ಡಿಜಿಟಲ್ ರೂಪದಲ್ಲಿ ಆನ್‍ಲೈನ್‍ನಲ್ಲಿ ಇಪಿಯುಬಿ-3' ಮಾದರಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

Free educational materials for disabled children
ಹೈಕೋರ್ಟ್‍ಗೆ ಸರ್ಕಾರದ ಮಾಹಿತಿ

By

Published : Feb 11, 2020, 11:01 PM IST

ಬೆಂಗಳೂರು: ರಾಜ್ಯದ ದಿವ್ಯಾಂಗ ವಿದ್ಯಾರ್ಥಿಗಳಿಗೆ ಮುಂಬರುವ ಶೈಕ್ಷಣಿಕ ವರ್ಷದಿಂದ ಬ್ರೈಲ್ ಲಿಪಿಯಲ್ಲಿ ಕಲಿಕಾ ಮತ್ತು ಶೈಕ್ಷಣಿಕ ಸಾಮಾಗ್ರಿಗಳನ್ನು ಉಚಿತವಾಗಿ ಪೂರೈಸಲು ಮತ್ತು ಅವುಗಳನ್ನು ಡಿಜಿಟಲ್ ರೂಪದಲ್ಲಿ ಆನ್‍ಲೈನ್‍ನಲ್ಲಿ 'ಇಪಿಯುಬಿ-3' ಮಾದರಿಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ಮಾಹಿತಿ ನೀಡಿದೆ.

ಹೈಕೋರ್ಟ್‍ಗೆ ಸರ್ಕಾರದ ಮಾಹಿತಿ

ಅಂಧ ಮತ್ತು ವಿಶೇಷ ಸಾಮರ್ಥ್ಯವುಳ್ಳ 1ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಸಾಮಾಗ್ರಿಗಳನ್ನು ಪೂರೈಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ದಿ ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ಲೈಂಡ್ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಮಕ್ಕಳ ಪಠ್ಯಪುಸ್ತಕಗಳ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ಪಠ್ಯ ಪುಸ್ತಕ ಸಂಘವು, ದಿವ್ಯಾಂಗ ಹಾಗೂ ವಿಶೇಷ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ರಾಜ್ಯ ಪಠ್ಯ ಕ್ರಮದ 1ರಿಂದ 10ನೇ ತರಗತಿಯ ಪಠ್ಯಪುಸ್ತಕಗಳನ್ನು ಇಪಿಯುಬಿ-3 ಮಾದರಿಯಲ್ಲಿ ಒದಗಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಲು ರಾಜ್ಯ ಪಠ್ಯಪುಸ್ತಕ ಸಂಘದ ಉಪನಿರ್ದೇಶಕರ ನೇತೃತ್ವದಲ್ಲಿ 10 ಮಂದಿಯ ಸಮಿತಿ ರಚಿಸಲಾಗಿದೆ ಎಂದರು.

ಇಪಿಯುಬಿ-3 ಪಠ್ಯಪುಸ್ತಕಗಳನ್ನು ಪ್ರಸಕ್ತ ಶೈಕ್ಷಣಿಕ ವರ್ಷ ಅಂದರೆ 2020ರ ಜೂನ್ ವೇಳೆಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತೇವೆ ಎಂದು ವಿವರಿಸಿದರು.

ಪ್ರಕರಣದ ಹಿನ್ನೆಲೆ:

ಆರ್​ಟಿಐ ಕಾಯ್ದೆ-2009, ವಿಕಲಚೇತನರ ಕಾಯ್ದೆ-1995 ಹಾಗೂ ಅಂಗವಿಕಲರ ಹಕ್ಕುಗಳಿಗೆ ಸಂಬಂಧಿಸಿದಂತೆ ಭಾರತವು ವಿಶ್ವಸಂಸ್ಥೆಯಲ್ಲಿ ಮಾಡಿಕೊಂಡಿರುವ ಒಪ್ಪಂದದಂತೆ ಮೇಲಿನ ಎಲ್ಲವುಗಳನ್ನು ಆಧುನಿಕ ಸುಧಾರಿತ ಮಾದರಿಯಲ್ಲಿ ಲಭ್ಯಗೊಳಿಸುವುದು ಎಲ್ಲ ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಅದರಂತೆ, 2016ರ ನವೆಂಬರ್ 29ರಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವಿಲಕಚೇತನರ ಸಬಲೀಕರಣ ಇಲಾಖೆ ಎಲ್ಲಾ ರಾಜ್ಯಗಳಿಗೆ ಲಿಖಿತ ನಿರ್ದೇಶನ ನೀಡಿದೆ.

ಇದನ್ನು ಈಗಾಗಲೇ ರಾಜಸ್ಥಾನದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಆದರೆ, ಈವರೆಗೆ ಕರ್ನಾಟಕದಲ್ಲಿ ಇದರ ವ್ಯವಸ್ಥೆ ಇಲ್ಲ. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ABOUT THE AUTHOR

...view details