ಕರ್ನಾಟಕ

karnataka

ಫ್ರೀ ಕಾಶ್ಮೀರ ಗೋಡೆ ಬರಹ‌ ಕೇಸ್: ಆರೋಪಿ ಪತ್ತೆ ಹಚ್ಚುವುದೇ ಪೊಲೀಸರಿಗೆ ಸವಾಲ್!

By

Published : Feb 10, 2020, 4:32 PM IST

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಚರ್ಚ್​ ಸ್ಟ್ರೀಟ್​ನ ಗೋಡೆಗಳ ಮೇಲೆ ರಾತ್ರೋರಾತ್ರಿ ಫ್ರೀ ಕಾಶ್ಮೀರ ಹಾಗೂ ನಾನು ಯಾವುದೇ ದಾಖಲೆ ತೋರಿಸುವುದಿಲ್ಲ ಎಂಬ ಬರಹಗಳನ್ನು ಬರೆಯಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಈವರೆಗೂ ಗೋಡೆ ಬರಹ ಬರೆದವರೂ ಮಾತ್ರ ಪತ್ತೆಯಾಗಿಲ್ಲ.

Free Kashmir wall writing case accused not yet found
ಚೇತನ್ ಸಿಂಗ್ ರಾಥೋರ್, ಕೇಂದ್ರ ವಿಭಾಗ ಡಿಸಿ

ಬೆಂಗಳೂರು: ನಗರದ ಚರ್ಚ್ ಸ್ಟ್ರೀಟ್​ನಲ್ಲಿ ಫ್ರೀ ಕಾಶ್ಮೀರ ಎಂದು ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆ ಸಂದರ್ಭದಲ್ಲಿ ಚರ್ಚ್​ ಸ್ಟ್ರೀಟ್​ನ ಗೋಡೆಗಳ ಮೇಲೆ ರಾತ್ರೋರಾತ್ರಿ ಫ್ರೀ ಕಾಶ್ಮೀರ, ನಾನು ಯಾವುದೇ ದಾಖಲೆ ತೋರಿಸುವುದಿಲ್ಲ ಎಂಬ ಬರಹಗಳನ್ನು ಬರೆಯಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ, ಈವರೆಗೂ ಗೋಡೆ ಬರಹ ಬರೆದವರೂ ಮಾತ್ರ ಪತ್ತೆಯಾಗಿಲ್ಲ.

ಚೇತನ್ ಸಿಂಗ್ ರಾಥೋರ್, ಕೇಂದ್ರ ವಿಭಾಗ ಡಿಸಿ

ಈ ಕುರಿತು ಕೇಂದ್ರ ವಿಭಾಗ ಡಿಸಿಪಿ, ಚೇತನ್ ಸಿಂಗ್ ರಾಥೋರ್​​ ಮಾತನಾಡಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಸುವ ಉದ್ದೇಶದಿಂದ ಕೆಲವರು ಈ ಕೃತ್ಯವೆಸಗಿದ್ದಾರೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ನಾವೇ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ಆದರೆ, ಆರೋಪಿಗಳು ಈವರೆಗೂ ಪತ್ತೆಯಾಗಿಲ್ಲ ಎಂದರು.

For All Latest Updates

TAGGED:

ABOUT THE AUTHOR

...view details