ಕರ್ನಾಟಕ

karnataka

By

Published : Mar 22, 2023, 7:19 AM IST

ETV Bharat / state

SSLC ವಿದ್ಯಾರ್ಥಿಗಳೇ, ಕೆಎಸ್ಆರ್​​ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಿ ಪರೀಕ್ಷೆ ಬರೆಯಿರಿ!

ಎಸ್​ಎಸ್​ಎಲ್​​ಸಿ ಪರೀಕ್ಷಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಉಚಿತ ಬಸ್ ಪ್ರಯಾಣದ ಅನುಕೂಲ ಒದಗಿಸಿದೆ.

free-travel-in-ksrtc-for-sslc-examinees
ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಕೆಎಸ್ಆರ್​​ಟಿಸಿಯಲ್ಲಿ ಉಚಿತ ಪ್ರಯಾಣ

ಬೆಂಗಳೂರು : ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿ ಉಚಿತ ಬಸ್ ಪ್ರಯಾಣ ಕಲ್ಪಿಸಿದೆ. 31-03-2023 ರಿಂದ 15-04-2023 ರವರೆಗೆ ನಡೆಯಲಿರುವ ಪರೀಕ್ಷಾ ದಿನಗಳಂದು ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ತೋರಿಸಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ತೆರಳಲು ಮತ್ತು ವಾಪಸ್ ಮರಳಲು ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

ವಿದ್ಯಾರ್ಥಿಗಳಿಗೆ ಈ ಸೌಲಭ್ಯ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಮನವಿ ಮಾಡಿದ್ದರು. 2022-23ನೇ ಸಾಲಿನಲ್ಲಿ ಪರೀಕ್ಷೆ ನಡೆಯುವ ದಿನಾಂಕಗಳ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಉಚಿತ ಪ್ರಯಾಣ ಅನುಮತಿಸಲು ನಿಗಮದ ಎಲ್ಲಾ ಚಾಲಕ / ನಿರ್ವಾಹಕರುಗಳಿಗೆ ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ. ಜೊತೆಗೆ, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ಸು ಸಂಚರಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳು ಬಸ್ಸನ್ನು ಹತ್ತುವವರಿದ್ದಲ್ಲಿ ಹಾಗೂ ಸಂಚರಿಸುವ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳು ಬಸ್ಸು ಹತ್ತಲು / ಇಳಿಯಲು ಅನುಕೂಲವಾಗುವಂತೆ ಕೋರಿಕೆ ನಿಲುಗಡೆ ನೀಡಲು ಚಾಲನಾ ಸಿಬ್ಬಂದಿಗೆ ಸೂಚನೆ ನೀಡಲು ತೀರ್ಮಾನಿಸಲಾಗಿದೆ.

ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ

ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್: ಕೆಂಪೇಗೌಡ ಬಸ್ ನಿಲ್ದಾಣದಿಂದ ಚಿಕ್ಕಬಳ್ಳಾಪುರ ಬಸ್ ನಿಲ್ದಾಣಕ್ಕೆ ಮಾರ್ಗಸಂಖ್ಯೆ V-298MN ಹವಾನಿಯಂತ್ರಿತ ಸಾರಿಗೆಗಳ ಪ್ರಾಯೋಗಿಕ ಕಾರ್ಯಾಚರಣೆ ಮಂಗಳವಾರದಿಂದ ಆರಂಭವಾಗಿದೆ. ಚಿಕ್ಕಬಳ್ಳಾಪುರ ಸುತ್ತಮುತ್ತಲಿನ ಪಯಾಣಿಕರ ಹೆಚ್ಚಿನ ಅನುಕೂಲಕ್ಕಾಗಿ, ಕಂಪೇಗೌಡ ಬಸ್‌ ನಿಲ್ದಾಣದಿಂದ ಹೆಬ್ಬಾಳ, ಯಲಹಂಕ, ರಾಣಿ ಕ್ರಾಸ್/ದೇವನಹಳ್ಳಿ ಮಾರ್ಗವಾಗಿ ಚಿಕ್ಕಬಳ್ಳಾಪುರ ಬಸ್‌ ನಿಲ್ದಾಣಕ್ಕೆ ನೂತನವಾಗಿ ಮಾರ್ಗಸಂಖ್ಯೆV-298MN ಹವಾನಿಯಂತ್ರಿತ ಸಾರಿಗೆಗಳ ಪ್ರಾಯೋಗಿಕ ಕಾರ್ಯಾಚರಣೆ ಆರಂಭವಾಗಿದೆ.

ಚಿಕ್ಕಬಳ್ಳಾಪುರ ಸಿವಿಲ್ ಬಸ್ ನಿಲ್ದಾಣದಲ್ಲಿ ಸಚಿವ ಡಾ.ಕೆ.ಸುಧಾಕರ್, ನೂತನ ಮಾರ್ಗದ ಎರಡು ಬಸ್ಸುಗಳಿಗೆ ಹಸಿರು ನಿಶಾನೆ ತೋರಿಸಿದರು. ಕಾರ್ಯಕ್ರಮದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧ್ಯಕ್ಷ ಎನ್.ಎಸ್‌.ನಂದೀಶ್ ಸೇರಿ ನಿಗಮದ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ಮೂಲಕ ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಗಿಫ್ಟ್ ನೀಡಲಾಗಿದೆ.

ಬೆಂಗಳೂರು ನೆರೆಯ ಜಿಲ್ಲೆ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಸೇವೆ ವಿಸ್ತರಿಸಬೇಕು ಎಂಬುದು ದಶಕಗಳ ಬೇಡಿಕೆಯಾಗಿತ್ತು. ಅದು ಮಂಗಳವಾರದಿಂದ ನನಸಾಗಿದೆ. ಕೆಲವು ತಿಂಗಳ ಹಿಂದೆ ಬಸ್‌ ಸೌಲಭ್ಯ ಆರಂಭಿಸಲು ಬಿಎಂಟಿಸಿ ಮುಂದಾಗಿತ್ತಾದರೂ ಕೆಎಸ್‌ಆರ್‌ಟಿಸಿ ವತಿಯಿಂದ ವಿರೋಧ ವ್ಯಕ್ತವಾಗಿತ್ತು. ಅಂತರ್‌ಜಿಲ್ಲಾ ಸೇವೆಯಾಗಲಿದ್ದು, ನಮಗೆ ನಷ್ಟವಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಈ ಸಂಬಂಧ ಎರಡೂ ಸಂಸ್ಥೆಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದವು. ಸದ್ಯ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಬಿಎಂಟಿಸಿ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಇದರಿಂದ ನಿತ್ಯ ಬೆಂಗಳೂರು ಓಡಾಡುವ ಚಿಕ್ಕಬಳ್ಳಾಪುರ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ.

ವೇಳಾಪಟ್ಟಿ (ನಿರ್ಗಮನ ಸಮಯ): ಚಿಕ್ಕಬಳ್ಳಾಪುರ ಬಸ್ ನಿಲ್ದಾಣದಿಂದ - (08.10, 08.20, 12.35, 13.05, 19.15, 19.35)

ಕೆಂಪೇಗೌಡ ಬಸ್ ನಿಲ್ದಾಣದಿಂದ -(10.25, 11.00, 17.30, 17.45, 21.15, 21.35)

ಇದನ್ನೂ ಓದಿ :ಆರು ಜಿಲ್ಲೆಗಳಿಗೆ ಇವಿ ಪವರ್ ಪ್ಲಸ್ ಬಸ್ ಸೇವೆ: ಮೊದಲ ಹಂತದ 25 ಬಸ್​ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ABOUT THE AUTHOR

...view details