ಬೆಂಗಳೂರು: ಕೋವಿಡ್-19ಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವ ಕುರಿತು ಚರ್ಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಉಚಿತವಾಗಿ ಕೋವಿಡ್ ಪರೀಕ್ಷೆ ಮಾಡಲು 25 ಸಾವಿರ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ ಕಿಟ್ಗಳನ್ನು ಜಿಲ್ಲೆಗೆ ಸರಬರಾಜು ಮಾಡಲಾಗುವುದು. 15 ಆ್ಯಂಬುಲೆನ್ಸ್ಗಳನ್ನು ಕೂಡಲೇ ಮಂಜೂರು ಮಾಡಲಾಗುವುದು. ಕೊರೊನಾ ಸೋಂಕಿತರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿದ ಕೂಡಲೇ ಅಗತ್ಯವಿದ್ದಲ್ಲಿ ಹತ್ತಿರದ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರಿ ವೆಚ್ಚದಲ್ಲಿ ಉಚಿತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು, ಚಿಕಿತ್ಸಾ ವೆಚ್ಚವನ್ನೂ ಸರ್ಕಾರವೇ ಭರಿಸಲು ಆದೇಶ ನೀಡುವುದಾಗಿ ತಿಳಿಸಿದರು.