ಬೆಂಗಳೂರು: ನಾವೆಲ್ಲಾ ಶಾಸಕರು ಸಂದಿಗ್ಧ ಪರಿಸ್ಥಿತಿಯಲ್ಲಿದ್ದೇವೆ. ಹೇಳಿಕೊಳ್ಳೋಕೂ ಆಗಲ್ಲ, ಬಿಡೋದಕ್ಕೂ ಆಗಲ್ಲ. ಅಂತಹ ಪರಿಸ್ಥಿತಿ ನಮ್ಮದಾಗಿದೆ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಮ್ಮ ಅಸಮಾಧಾನವನ್ನು ಹೊರ ಹಾಕಿದರು.
ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಒಂದು ಮಾತನಾಡಿದರೆ ದೊಡ್ಡದಾಗುತ್ತದೆ. ಒಂದು ಮಾತು ಬಿಟ್ಟರೆ ಸಣ್ಣದಾಗುತ್ತದೆ. ನಾವು ಏನೇ ಮಾತನಾಡಿದರೂ ಕಷ್ಟ. ನಮಗೂ ಅನೇಕ ಸಮಸ್ಯೆಗಳಿವೆ. ಕ್ಷೇತ್ರಕ್ಕೆ ಹೋದರೆ ಕೆಲಸ ಆಗುತ್ತಿಲ್ಲವೆಂದು ಜನ ಬೈಯುತ್ತಾರೆ. ಇನ್ನು ಮಂತ್ರಿಗಳಿಗೆ ಹೇಳಿಕೊಳ್ಳೋಣವೆಂದರೆ ಅವರೇ ಸಿಗುತ್ತಿಲ್ಲ. ನಾವು ಮಾತನಾಡಿದರೆ ಬೇರೆ ಬೇರೆ ಬಣ್ಣ ಕಟ್ಟುತ್ತಾರೆ ಎಂದು ಸರ್ಕಾರದ ವಿರುದ್ಧ ಗೂಳಿಹಟ್ಟಿ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.