ಬೆಂಗಳೂರು: ಕಸದಿಂದ ವಿದ್ಯುತ್ ತಯಾರಿಕಾ ಘಟಕಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನಗರದ ಹೊರವಲಯಗಳಿಗೆ ವಿದ್ಯುತ್ ಉತ್ಪಾದನೆ ಘಟಕಗಳಿಗೆ ಈಗಾಗಲೇ ಟೆಂಡರ್ ನೀಡಲಾಗಿದೆ. ಚಿಕ್ಕನಾಗಮಂಗಲ - ತ್ರೀ ವೇಸ್ಟ್ ಕಂಪನಿ, ಕೆಪಿಸಿಎಲ್- ಬಿಡದಿ ಸಂಸ್ಥೆ, ದೊಡ್ಡಬಿದಿರೆಕಲ್ಲು - ಇಂಡಿಯಂ ಸಂಸ್ಥೆ, ಕನ್ನಹಳ್ಳಿ - ಸತರಾಂ ಸಂಸ್ಥೆ ಸೇರಿ ಒಟ್ಟು ನಗರದ 4 ಕಡೆ ವಿದ್ಯುತ್ ಉತ್ಪಾದನೆಗೆ ತಯಾರಿ ನಡೆಯುತ್ತಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದರು.
ಬೆಳ್ಳಳ್ಳಿ ಕ್ವಾರಿ ಒಂದು ವಾರದಲ್ಲಿ ಕ್ಲೋಸ್.!
ಇನ್ನು ಮುಂದಿನ ಒಂದು ವಾರ ಅಥವಾ 10 ದಿನಗಳಲ್ಲಿ ಬೆಳ್ಳಳ್ಳಿ ಕ್ವಾರಿ ಭರ್ತಿಯಾಗಲಿದ್ದು, ಅಲ್ಲಿ ಕಸ ಹಾಕಲು ಸಾಧ್ಯವಾಗುವುದಿಲ್ಲ. ಹೀಗಾಗಿ ಬೆಂಗಳೂರಿನ ಮಿಶ್ರ ತ್ಯಾಜ್ಯ ಸುರಿಯಲು 15 ಕೋಟಿ ರೂಪಾಯಿ ವೆಚ್ಚದಲ್ಲಿ ಮಿಟಗಾನಹಳ್ಳಿ ಸಮೀಪ ಕ್ವಾರಿ ಸಿದ್ಧವಾಗಿದೆ. ಮುಂದಿನ 4 ತಿಂಗಳು ನಗರದ ಕಸ ಹಾಕಲು ಇಲ್ಲಿ ಅವಕಾಶವಿದೆ. ಸರ್ಕಾರಕ್ಕೆ ಸದ್ಯ ಬಾಗಲೂರು ಹಾಗೂ ಹುಲ್ಲಹಳ್ಳಿಯಲ್ಲೂ ಕ್ವಾರಿ ಪಿಟ್ ತಯಾರು ಮಾಡುವ ಪ್ರಸ್ತಾವನೆ ನೀಡಲಾಗಿದೆ ಎಂದು ವಿಶೇಷ ಆಯುಕ್ತ ರಂದೀಪ್ ಮಾಹಿತಿ ನೀಡಿದರು.
ಪಾರ್ಕ್ ಗಳಲ್ಲಿ ಕಸ ನಿರ್ವಹಣೆಗೆ ಚಿಂತನೆ :