ಬೆಂಗಳೂರು: ಗಂಗಾ ಕಲ್ಯಾಣ ಕೊಳವೆ ಬಾವಿ ಯೋಜನೆಯಲ್ಲಿನ ಅಕ್ರಮ ಆರೋಪದ ಬಗ್ಗೆ ಸಿಐಡಿ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಒಳಾಡಳಿತಕ್ಕೆ ಪತ್ರ ಬರೆದು ಸಿಐಡಿ ತನಿಖೆ ನಡೆಸುವಂತೆ ಕೋರಿದ್ದಾರೆ. 2019-20 ಹಾಗೂ 2020-21ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಆಹ್ವಾನಿಸಿರುವ ಟೆಂಡರ್ಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ಸಿಐಡಿಯಿಂದ ತನಿಖೆ ನಡೆಸುವಂತೆ ಕೋರಲಾಗಿದೆ.
ಏನಿದು ಆರೋಪ?: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ 2019-20 ಹಾಗೂ 2020-21ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಆಹ್ವಾನಿಸಿರುವ ಟೆಂಡರ್ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಬಿಡ್ದಾರರು ಅಕ್ರಮ/ನಕಲಿ ದಾಖಲಾತಿಗಳನ್ನು (Forgery/illegal Documents) ಸಲ್ಲಿಸಿ ನಿಯಮಗಳನ್ನು ಉಲ್ಲಂಘಿಸಿ ಯಶಸ್ವಿ ಬಿಡ್ದಾರರಾಗಿ ಆಯ್ಕೆಗೊಂಡಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು.