ಕರ್ನಾಟಕ

karnataka

ETV Bharat / state

IPS Officers Transfer: ಸಂದೀಪ್ ಪಾಟೀಲ್, ರಮಣ್ ಗುಪ್ತ ಸೇರಿ 15 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರ್ಕಾರವು 15 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

By

Published : Jun 20, 2023, 3:28 PM IST

govt-ordered-transfer-of-15-ips-officers
ಸಂದೀಪ್ ಪಾಟೀಲ್, ರಮಣ್ ಗುಪ್ತ ಸೇರಿ 15 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಸಂದೀಪ್ ಪಾಟೀಲ್ ಅವರನ್ನು ಕೆಎಸ್ಆರ್​ಪಿ ಐಜಿಪಿಯಾಗಿ ನೇಮಿಸಿದೆ. ಇವರಿಂದ ತೆರವಾದ ಹುದ್ದೆಗೆ ಬೆಳಗಾವಿ ಉತ್ತರ ವಲಯ ಐಜಿಯಾಗಿದ್ದ ಸತೀಶ್ ಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ಪೊಲೀಸ್ ಅಭಿವೃದ್ಧಿ ನಿಗಮದ ಎಡಿಜಿಪಿಯಾಗಿ ಡಾ. ಕೆ. ರಾಮಚಂದ್ರ ರಾವ್, ರಾಜ್ಯ ಬಂಧೀಖಾನೆ ಇಲಾಖೆಯ ಎಡಿಜಿಪಿಯಾಗಿ ಮಾಲಿನಿ ಕೃಷ್ಣಮೂರ್ತಿ, ರಾಜ್ಯ ನಾಗರೀಕ ಹಕ್ಕುಗಳ ನಿರ್ದೇಶನಾಲಯದ ಎಡಿಜಿಪಿಯಾಗಿ ಅರುಣ್ ಚಕ್ರವರ್ತಿ, ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿಯಾಗಿ ಮನೀಶ್ ಖರ್ಬಿಕರ್, ರಾಜ್ಯ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿಯಾಗಿ ಎಂ.ಚಂದ್ರಶೇಖರ್, ಬೆಂಗಳೂರು ನಗರ ಪೂರ್ವ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ವಿಪುಲ್ ಕುಮಾರ್, ಸಿಐಡಿ ಐಜಿಪಿಯಾಗಿ ಪ್ರವೀಣ್ ಮಧುಕರ್ ಪವಾರ್, ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ ವಿಕಾಸ್ ಕುಮಾರ್ ವಿಕಾಸ್, ಬೆಳಗಾವಿ ಉತ್ತರ ವಲಯ ಐಜಿಪಿಯಾಗಿ ರಮಣ್ ಗುಪ್ತ, ಬೆಂಗಳೂರು ಪೊಲೀಸ್ ಪ್ರಧಾನ ಕಚೇರಿ ಐಜಿಪಿಯಾಗಿ ಎಸ್.ಎನ್. ಸಿದ್ದರಾಮಪ್ಪ, ಬೆಂಗಳೂರು ದಕ್ಷಿಣ ವಲಯ ಡಿಐಜಿಯಾಗಿ ಎಂ.ಬಿ.ಬೋರಲಿಂಗಯ್ಯ, ಸಿಐಡಿ ಆರ್ಥಿಕ ಅಪರಾಧ ವಿಭಾಗದ ಡಿಐಜಿಯಾಗಿ ಸಿ.ವಂಶಿಕೃಷ್ಣ ಹಾಗೂ ಸಿ.ಬಿ. ರಿಷ್ಯಂತ್ ಅವರನ್ನು ಮಂಗಳೂರು ಎಸ್ಪಿಯಾಗಿ ವರ್ಗಾವಣೆಯಾಗಿದೆ. ಸಂಜೆಯೊಳಗೆ ಎಸ್ಪಿಗಳ ಮಟ್ಟದಲ್ಲಿ ಅಧಿಕಾರಿಗಳು ವರ್ಗಾವಣೆ ಆದೇಶ ಬರುವ ಸಾಧ್ಯತೆಯಿದೆ.

ಡಿಸಿಎಂ ಡಿಕೆಶಿ ತಾಂತ್ರಿಕ ಸಲಹೆಗಾರರಾಗಿ ಕೆ.ಟಿ ನಾಗರಾಜ್ ನೇಮಕ :ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ತಾಂತ್ರಿಕ ಸಲಹೆಗಾರರಾಗಿ ಕೆ ಟಿ ನಾಗರಾಜ್ ನೇಮಕಗೊಂಡಿದ್ದಾರೆ. ಕೆ.ಟಿ ನಾಗರಾಜ್, ಬಿಬಿಎಂಪಿ ನಿವೃತ್ತ ಚೀಫ್ ಎಂಜಿನಿಯರ್ ಆಗಿದ್ದಾರೆ. ಪಾಲಿಕೆ ತಾಂತ್ರಿಕ ವಿಭಾಗದಲ್ಲಿ ಸಿಇ ಆಗಿದ್ದ ಕೆ.ಟಿ ನಾಗರಾಜ್ ತಕ್ಷಣದಿಂದ ಉಪ ಮುಖ್ಯಮಂತ್ರಿಗಳ ತಾಂತ್ರಿಕ ಸಲಹೆಗಾರರಾಗಿ ಮುಂದುವರೆಯಲಿದ್ದಾರೆ. ರಾಜ್ಯಪಾಲರ ಆದೇಶದ ಅನುಸಾರ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ವಿ ಅಶೋಕ್ ಈ ಆದೇಶ ಹೊರಡಿಸಿದ್ದಾರೆ.

ಕೆ.ಟಿ. ನಾಗರಾಜ ಅವರನ್ನು ಉಪಮುಖ್ಯಮಂತ್ರಿಯವರ ಆಪ್ತ ಶಾಖೆಯಲ್ಲಿನ ಒಂದು ಗ್ರೂಪ್-ಸಿ ಹುದ್ದೆಯನ್ನು ತಾತ್ಕಾಲಿಕವಾಗಿ ನಿಲಂಬನೆಯಲ್ಲಿರಿಸಿ, ಸದರಿ ಗ್ರೂಪ್ 'ಸಿ' ಹುದ್ದೆಯನ್ನು ತಾತ್ಕಾಲಿಕವಾಗಿ ತಾಂತ್ರಿಕ ಸಲಹೆಗಾರರು (ಗ್ರೂಪ್-ಎ) ಹುದ್ದೆಯನ್ನಾಗಿ ಉನ್ನತೀಕರಿಸಿ, ಸದರಿ ತಾಂತ್ರಿಕ ಸಲಹೆಗಾರರು (ಗ್ರೂಪ್-ಎ) ಹುದ್ದೆ ನೀಡಲಾಗಿದೆ. ಉಪ ಮುಖ್ಯಮಂತ್ರಿಯವರ ಪದಾವಧಿಯವರೆಗೆ ಅಥವಾ ಮುಂದಿನ ಆದೇಶದವರೆಗೆ - ಇವುಗಳಲ್ಲಿ ಯಾವುದು ಮೊದಲೋ, ಅಲ್ಲಿಯವರೆಗೆ ನಾಗರಾಜ್ ಅವರನ್ನು ಉಪ ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರನ್ನಾಗಿ ಗುತ್ತಿಗೆ ಆಧಾರದ ಮೇಲೆ ನೇಮಿಸಿ ಆದೇಶಿಸಲಾಗಿದೆ.

ಕೆ.ಟಿ. ನಾಗರಾಜ, ಇವರ ಗುತ್ತಿಗೆ ಆಧಾರದ ನೇಮಕಾತಿಗೆ ಸಂಬಂಧಿಸಿದ ಷರತ್ತು ಮತ್ತು ನಿಬಂಧನೆಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹು-ಧಾ ಪೊಲೀಸ್ ಕಮೀಷನರ್ ರಮಣ ಗುಪ್ತಾ ವರ್ಗಾವಣೆ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಐಪಿಎಸ್ ಅಧಿಕಾರಿ ಲಾಭುರಾಮ್ ವರ್ಗಾವಣೆ ಬೆನ್ನಲ್ಲೇ ತೆರವು ಆಗಿದ್ದ ಸ್ಥಾನಕ್ಕೆ ಐಪಿಎಸ್ ಅಧಿಕಾರಿ ರಮಣ್ ಗುಪ್ತಾ ಅವರನ್ನು ನೇಮಿಸಲಾಗಿತ್ತು. ಆದರೆ ಈಗ ರಮಣ ಗುಪ್ತ ಅವರನ್ನು ಉತ್ತರ ವಲಯ ಐಜಿಪಿಯನ್ನಾಗಿ ಪದೊನ್ನತಿಗೊಳಿಸಿ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಸ್ಥಾನಕ್ಕೆ ಇನ್ನೂ ಯಾರನ್ನು ನೇಮಕ ಮಾಡಿಲ್ಲ.

ಇದನ್ನೂ ಓದಿ :IAS Transfer: 14 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ

ABOUT THE AUTHOR

...view details