ಬೆಂಗಳೂರು: ಅರಣ್ಯ ಪ್ರದೇಶಗಳಲ್ಲಿ ಹಣ್ಣಿನ ಮರಗಳನ್ನು ಬೆಳೆಸಲು ಅರಣ್ಯ ಇಲಾಖೆ ಪ್ರಯತ್ನಿಸಲಿ. ಇದರಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರ ಒದಗಿಸುವುದರ ಜೊತೆಗೆ ಅರಣ್ಯ ಪ್ರದೇಶದ ಹೆಚ್ಚಳವಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಅರಣ್ಯ ಭವನದಲ್ಲಿ ಎಲ್ಲಾ ವೃತ್ತಗಳ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಪ್ರಾದೇಶಿಕ ವನ್ಯಜೀವಿ /ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಸಿಎಂ, ಅರಣ್ಯ ಅಭಿವೃದ್ಧಿಗೆ ಅರಣ್ಯವಾಸಿಗಳ ಮತ್ತು ರೈತರ ಸಹಕಾರ ಬಹಳ ಮುಖ್ಯ, ಅವರೊಂದಿಗೆ ಸೌಹಾರ್ದಯುತ ಸಂಬಂಧ ಬೆಳೆಸಿಕೊಳ್ಳುವುದು ಅರಣ್ಯ ಅಧಿಕಾರಿಗಳ ಕರ್ತವ್ಯ ಎಂದು ಮುಖ್ಯಮಂತ್ರಿಗಳು ಕಿವಿಮಾತು ಹೇಳಿದರು.