ಬೆಂಗಳೂರು: ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಯೋಜನೆ ರೂಪಿಸಬೇಕು. ಇಲ್ಲವಾದರೆ ಬಡವರಿಗೆ ಫಲವೇ ಸಿಗದು ಎಂಬ ಅಂಬೇಡ್ಕರ್ ಮಾತು ಎಂದಿಗೂ ಪ್ರಸ್ತುತ. ಈ ಚಿಂತನೆಯನ್ನು ನಾನು ಬಲವಾಗಿ ನಂಬಿದ್ದೇನೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ವಿವಿಧತೆಗಳ ಈ ದೇಶ ಐಕ್ಯತೆಯಿಂದ ಹೆಜ್ಜೆ ಇಟ್ಟದ್ದು, ಅಂಬೇಡ್ಕರ್ ರಚಿತ ಸಂವಿಧಾನದ ದಾರಿದೀವಿಗೆಯಲ್ಲಿ ಎಂದಿದ್ದಾರೆ.