ಗಂಗಾವತಿ/ಬೆಂಗಳೂರು: ನಗರದಲ್ಲಿ ಕಾನೂನುಬಾಹಿರವಾಗಿ ಅಂದರ್-ಬಾಹರ್, ಇಸ್ಪೀಟ್ ಕ್ಲಬ್ ಮತ್ತು ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲೂಕಿನಲ್ಲಿ ನಡೆಯುತ್ತಿರುವ ಮೀಟರ್ ಬಡ್ಡಿಯ ವಿಚಾರವಾಗಿ ಸದನದಲ್ಲಿ ಚರ್ಚೆ ನಡೆಯಿತು.
ಮಧ್ಯಾಹ್ನದ ಬಳಿಕ ಸದನದಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ತಮಗೆ ಲಭಿಸಿರುವ ದಾಖಲೆ ಅನ್ವಯ ಈ ಬಗ್ಗೆ ಪ್ರಸ್ತಾಪಿಸಿ ಸ್ಪೀಕರ್ ಗಮನಕ್ಕೆ ತರಲು ಯತ್ನಿಸಿದರು.
ಗಂಗಾವತಿಯಲ್ಲಿ 20ಕ್ಕೂ ಹೆಚ್ಚು ಇಸ್ಪೀಟ್ ಕ್ಲಬ್ಗಳಿವೆ. ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೂ ಪೊಲೀಸರು ಕಣ್ಣುಮುಚ್ಚಿ ಕುಳಿತ್ತಿದ್ದಾರೆ. ಮೀಟರ್ ಬಡ್ಡಿಗೆ ಹಣಕೊಟ್ಟು ಇಸ್ಪೀಟ್ ಆಡಿಸಲು ಕೆಲವರು ಕುಮ್ಮಕ್ಕು ನೀಡುತ್ತಿದ್ದಾರೆ ಎಂದರು.