ಕರ್ನಾಟಕ

karnataka

ETV Bharat / state

ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸುವ ನಿರ್ಧಾರದಿಂದ ಸರ್ಕಾರ ತಕ್ಷಣವೇ ಹಿಂದೆ ಸರಿಯಬೇಕು: ಹೆಚ್​ಡಿಕೆ - ಬೆಂಗಳೂರು

ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರ, ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

By

Published : Jun 23, 2020, 1:27 PM IST

ಬೆಂಗಳೂರು: ಗುರುವಾರದಿಂದ ರಾಜ್ಯಾದ್ಯಂತ ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಈ ನಿರ್ಧಾರದಿಂದ ತಕ್ಷಣವೇ ಹಿಂದೆ ಸರಿಯಬೇಕು. ಪರೀಕ್ಷೆ ನಡೆಸಲೇಬೇಕು ಎಂದಾದರೆ ಅಕ್ಟೋಬರ್ ತಿಂಗಳವರೆಗೆ ಕಾಯ್ದು ನಡೆಸಲಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಲಹೆ

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕು ಏರುಗತಿಯಲ್ಲಿ ಸಾವಿನ ನಗಾರಿ ಬಾರಿಸುತ್ತಿರುವ ಇಂತಹ ಆತಂಕದ ಸಂದರ್ಭದಲ್ಲಿ ಸುಮಾರು 8 ಲಕ್ಷ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳು, ಪೋಷಕರು ಹಾಗೂ ಪರೀಕ್ಷಾ ಸಿಬ್ಬಂದಿ ಸೇರಿದಂತೆ 24 ಲಕ್ಷ ಮಂದಿಯ ಜೀವ ಮತ್ತು ಭವಿಷ್ಯದೊಂದಿಗೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಲಹೆ

ಕೊರೊನಾ ಸೋಂಕು ಸಮುದಾಯ ಪ್ರಸರಣ ಭೀತಿಯ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆಯನ್ನು ರದ್ದುಪಡಿಸಿ ಎಲ್ಲರನ್ನೂ ಉತ್ತೀರ್ಣಗೊಳಿಸಲಾಗಿದೆ. ಅದೇ ರೀತಿಯಲ್ಲಿ ರಾಜ್ಯ ಸರ್ಕಾರ ನಿರ್ಧಾರ ತಳೆಯಬಹುದು. ಪರೀಕ್ಷೆಗಳನ್ನು ನಡೆಸಲೇಬೇಕೆಂದರೆ ಅಕ್ಟೋಬರ್ ತಿಂಗಳವರೆಗೆ ಕಾಯಲಿ ಎಂದು ಒತ್ತಾಯಿಸಿದ್ದಾರೆ.

ಏನಾದರೂ ಅವಘಡಗಳು ಸಂಭವಿಸಿದರೆ ಶಿಕ್ಷಣ ಸಚಿವರು ಮತ್ತು ರಾಜ್ಯ ಸರ್ಕಾರವೇ ಹೊಣೆ ಎಂದು ಎಚ್ಚರಿಕೆ ನೀಡುತ್ತೇನೆ. ಸರ್ಕಾರ ಈ ಬಗ್ಗೆ ತಕ್ಷಣವೇ ನಿರ್ಧಾರ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ABOUT THE AUTHOR

...view details