ಕರ್ನಾಟಕ

karnataka

ETV Bharat / state

ಮಂಡ್ಯದಲ್ಲಿ ಎತ್ತಿನಗಾಡಿ ಸ್ಪರ್ಧೆ ಪ್ರಶ್ನಿಸಿ ಪಿಐಎಲ್: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ - PIL hearing

ಮಂಡ್ಯದ ಕೆರಗೋಡುವಿನ ಎತ್ತಿನ ಬಂಡಿ ಓಟದ ಸ್ಪರ್ಧೆ ಪ್ರಶ್ನಿಸಿದ್ದ ಪಿಐಎಲ್​ ವಿಚಾರಣೆ ಹೈಕೋರ್ಟ್​ನಲ್ಲಿ ನಡೆಯಿತು.

HC Notice to Govt
ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

By

Published : Jun 23, 2021, 6:45 AM IST

ಬೆಂಗಳೂರು: ಮಂಡ್ಯದಲ್ಲಿ ಹಬ್ಬಗಳ ಸಂದರ್ಭದಲ್ಲಿ ಎತ್ತಿನ ಬಂಡಿ ಓಟ ಸ್ಪರ್ಧೆ ನಡೆಸುವ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರ್ಕಾರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ. ಎತ್ತಿನ ಬಂಡಿ ಓಟ ಸ್ಪರ್ಧೆ ಪ್ರಶ್ನಿಸಿ ಮೈಸೂರಿನ ಪೀಪಲ್ ಫಾರ್ ಅನಿಮಲ್ಸ್ ವೆಲ್ಫೇರ್ ಆರ್ಗನೈಜೇಷನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಪಶುಸಂಗೋಪನೆ ಇಲಾಖೆ ಆಯುಕ್ತರು, ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿ, ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ, ಮಂಡ್ಯ ಜಿಲ್ಲಾಧಿಕಾರಿ ಹಾಗೂ ಕೆರಗೋಡು ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್​​ಗೆ ನೋಟಿಸ್ ಜಾರಿ ಮಾಡಿತು.

ಇದೇ ವೇಳೆ ಎತ್ತಿನ ಬಂಡಿ ಓಟದ ಸ್ಪರ್ಧೆಯು ತಮಿಳುನಾಡಿನ ಜಲ್ಲಿಕಟ್ಟು ಸ್ಪರ್ಧೆ ಸಂಬಂಧ ಸುಪ್ರೀಂಕೋರ್ಟ್ ನೀಡಿರುವು ತೀರ್ಪು ಉಲ್ಲಂಘನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಿತು.

ಅರ್ಜಿದಾರರ ಕೋರಿಕೆ:ಮಂಡ್ಯ ಜಿಲ್ಲೆಯ ಕೆರಗೋಡುವಿನಲ್ಲಿ ಹಬ್ಬಗಳ ಸಂದರ್ಭಗಳಲ್ಲಿ ಎತ್ತಿನ ಬಂಡಿ ಓಟದ ಸ್ಪರ್ಧೆ ಆಯೋಜಿಸಲಾಗುತ್ತಿದೆ. ಸ್ಪರ್ಧೆಯಲ್ಲಿ ಗೆದ್ದರೆ ಸಿಗುವ ಬಹುಮಾನ ಹಣದಾಸೆಗೆ ಎತ್ತುಗಳನ್ನು ವೇಗವಾಗಿ ಓಡಿಸಲು ಹಿಂಸಿಸಲಾಗುತ್ತಿದೆ. ಈ ಸ್ಪರ್ಧೆಗೆ ಅನುಮತಿ ನೀಡದಂತೆ ಹಾಗೂ ತಡೆಯುವಂತೆ ಸ್ಥಳೀಯ ತಹಶೀಲ್ದಾರ್ ಗೆ ಮನವಿ ನೀಡಿದ್ದರೂ ಕ್ರಮ ಜರುಗಿಸಿಲ್ಲ.

ಎತ್ತಿನ ಬಂಡಿ ಸ್ಪರ್ಧೆ ಮೂಲಕ ಜಾನುವಾರುಗಳನ್ನು ಹಿಂಸಿಸುವುದು ಕಾನೂನು ಬಾಹಿರ. ಹೀಗಾಗಿ ಸರ್ಕಾರಕ್ಕೆ ಇಂತಹ ಸ್ಪರ್ಧೆಗಳನ್ನು ನಡೆಸದಂತೆ ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂಓದಿ: ಶಬ್ದ ಮಾಲಿನ್ಯ ಮಾಪನಗಳ ಖರೀದಿ ಮಾಹಿತಿ ನೀಡಿ; ಡಿಜಿ-ಐಜಿಪಿಗೆ ಹೈಕೋರ್ಟ್ ನಿರ್ದೇಶನ

ABOUT THE AUTHOR

...view details