ಕರ್ನಾಟಕ

karnataka

'ಬಿಜೆಪಿ ಸಂಸ್ಥಾಪನಾ ದಿನ ಪ್ರಯುಕ್ತ ಜನರ ಕೈಯಲ್ಲಿ ಮೋದಿ ದೀಪ ಬೆಳಗಿಸುತ್ತಿದ್ದಾರಾ?': ಹೆಚ್ಡಿಕೆ

By

Published : Apr 5, 2020, 11:13 AM IST

Updated : Apr 5, 2020, 11:20 AM IST

ದೇಶದ ಸಂಕಟವನ್ನು ಬಗೆಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಮೋದಿ, ಏಪ್ರಿಲ್ 5ರ ದಿನವನ್ನೇ ದೀಪ ಬೆಳಗಿಸಲು ಆಯ್ದುಕೊಂಡಿರುವ ಹಿಂದಿನ ಮರ್ಮವೇನು? ದೀಪ ಹಚ್ಚುವ ಯೋಚನೆಯ ಹಿಂದಿನ ವೈಜ್ಞಾನಿಕ, ವೈಚಾರಿಕ ಕಾರಣವನ್ನು ಅವರು ಸ್ಪಷ್ಟಪಡಿಸಬೇಕು ಎಂದು ಕುಮಾರಸ್ವಾಮಿ ಟ್ವೀಟ್‌ ಮೂಲಕ ಆಗ್ರಹಿಸಿದ್ದಾರೆ.

hd kumaraswamy
ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಬಿಜೆಪಿ ಪಕ್ಷದ ಸಂಸ್ಥಾಪನಾ ದಿನಾಚರಿಸಲು ಕೊರೊನಾ ಸಂಕಷ್ಟವನ್ನು ಪ್ರಧಾನಿ ಮೋದಿ ದುರುಪಯೋಗ ಮಾಡಿಕೊಂಡರೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಏಪ್ರಿಲ್ 6, 1980 ಬಿಜೆಪಿ ಸಂಸ್ಥಾಪನಾ ದಿನ. ಬಿಜೆಪಿ ಪಕ್ಷ ಸ್ಥಾಪನೆಯಾಗಿ ಇಂದಿಗೆ 40 ವರ್ಷ ತುಂಬುತ್ತಿದೆ. ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೊನಾ ಸಂಕಷ್ಟದ ದಿನಗಳಲ್ಲಿ ನೇರಾನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನ ಮೆರೆಯುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.
ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿದೆ. ಹೀಗಿರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ರೀತಿಯ ತೋರಿಕೆಯ ಸಂಭ್ರಮ ಬೇಕೇ?. ಜಗತ್ತು ಕೊರೊನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ? ಎಂದು ಕುಟುಕಿದ್ದಾರೆ.
ಜೊತೆಗೆ ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ, ಕೈ ಹಿಡಿದು ನಡೆಸೆನ್ನನು ಎಂಬ ಪದೋಕ್ತಿ ಬರೆದು ಕೇಂದ್ರದ ನಡೆಯನ್ನು ಮಾಜಿ ಸಿಎಂ ಟೀಕಿಸಿದ್ದಾರೆ.
Last Updated : Apr 5, 2020, 11:20 AM IST

ABOUT THE AUTHOR

...view details