ಕರ್ನಾಟಕ

karnataka

By

Published : Apr 9, 2023, 2:22 PM IST

ETV Bharat / state

ವನ್ಯಜೀವಿ ನೋಡಲು ಬಂದ ತಕ್ಷಣ ಜನ ಮೋದಿಗೆ ಮತ ಒತ್ತಿ ಬಿಡ್ತಾರಾ?: ಹೆಚ್​ಡಿಕೆ

ಪ್ರವಾಹ, ಕೋವಿಡ್ ಅನಾಹುತದಿಂದ ಜನ ಬೀದಿಗೆ ಬಂದಾಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದಿರಲಿಲ್ಲ. ಈಗ ವನ್ಯಜೀವಿ ನೋಡಲು ಬಂದ ತಕ್ಷಣ ಜನ ಇವರಿಗೆ ಮತ ಹಾಕಿ ಬಿಡುತ್ತಾರಾ? ಎಂದು ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಕಿಚಾಯಿಸಿದ್ದಾರೆ.

kumaraswamy
ಹೆಚ್​ ಡಿ ಕುಮಾರಸ್ವಾಮಿ

ಬೆಂಗಳೂರು: ವನ್ಯಜೀವಿ ನೋಡಲು ಬಂದ ತಕ್ಷಣ ಜನ ಇವರಿಗೆ ಮತ ಒತ್ತಿ ಬಿಡ್ತಾರಾ? ಎಂದು ಮಾಜಿ ಸಿಎಂ, ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಹೆಚ್​ ಡಿ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಸಫಾರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಬಂಡೀಪುರ ಫಾರೆಸ್ಟ್ ಸಫಾರಿ ಕುರಿತು ಪ್ರತಿಕ್ರಿಯಿಸಿ, "ಪ್ರವಾಹ ಬಂದಾಗ, ಕೋವಿಡ್ ಅನಾಹುತದಿಂದ ಜನ ಬೀದಿಗೆ ಬಂದಾಗ ಇವರು ಬರಲಿಲ್ಲ. ಇವತ್ತು ಸಫಾರಿ ಮಾಡಲು ಬಂದಿದ್ದಾರೆ. ವನ್ಯಜೀವಿಗಳನ್ನ ರಕ್ಷಣೆ ಮಾಡಬೇಕು ನಿಜ. ಆದರೆ, ಮಾನವರ ರಕ್ಷಣೆಯನ್ನು ಮಾಡಬೇಕಲ್ವಾ" ಎಂದು ಪ್ರಶ್ನಿಸಿದ್ದಾರೆ.

ವನ್ಯ ಜೀವಿಗಳಿಂದ ದಾಳಿಗೊಳಗಾದ ಕುಟುಂಬ ಭೇಟಿ ಮಾಡಿದ್ರಾ- ಹೆಚ್​ ಡಿಕೆ ಪ್ರಶ್ನೆ.. ವನ್ಯಜೀವಿಗಳಿಂದ ಎಷ್ಟು ದಾಳಿ ಆಗಿದೆ?, ಎಷ್ಟು ಜೀವ ಹಾನಿ ಆಗಿದೆ?, ದಾಳಿಗೆ ಒಳಗಾದ ಯಾವುದಾದರೂ ಒಂದು ಕುಟುಂಬವನ್ನು ಭೇಟಿ ಮಾಡಿದ್ರಾ?, ವನ್ಯಜೀವಿ ದಾಳಿಗೆ ಒಳಗಾದ ಕುಟುಂಬದ ಪರಿಸ್ಥಿತಿ ಏನಾಗಿದೆ‌?, ಕೂಲಿಂಗ್ ಗ್ಲಾಸ್, ಸೂಟು - ಬೂಟು ಹಾಕೊಂಡು ಬಂದ್ರೆ ಆಗುತ್ತಾ? ಎಂದು ಹೆಚ್​ಡಿಕೆ ಕಿಡಿಕಾರಿದ್ದಾರೆ.

ಅರಣ್ಯ ಭಾಗದಲ್ಲಿ ಪೌಷ್ಟಿಕಾಂಶ, ಆಹಾರದ ಕೊರತೆ ಇದೆ ಅಂತ ವರದಿ ನೀಡಿದ್ದಾರೆ. ಅದರ ಬಗ್ಗೆ ಇವರಿಗೆ ಗಮನ ಹರಿಸಲು ಆಗಲ್ಲ. ನಾಡಿನ ಜನತೆ ಇದನ್ನು ಅರ್ಥ ಮಾಡಿಕೊಳ್ಳಬೇಕು. ವನ್ಯಜೀವಿಗಳನ್ನು ನೋಡಲು ಬಂದ ತಕ್ಷಣ ಇವರಿಗೆ ಮತದಾರರು ಓಟು ಒತ್ತಿ ಬಿಡ್ತಾರಾ ಎಂದು ಮೋದಿ ಮೈಸೂರು ಪ್ರವಾಸದ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ :ಹುಲಿ ಗಣತಿ ವರದಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ: ದೇಶದಲ್ಲಿರುವ ಹುಲಿಗಳ ನಿಖರ ಸಂಖ್ಯೆ ಬಹಿರಂಗ

ಶನಿವಾರ ರಾತ್ರಿ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ನಡೆಸಿದ್ದಾರೆ. ಸುಮಾರು 2 ಗಂಟೆಗಳ ಕಾಲ ಭಾನುವಾರ ಬೆಳಗ್ಗೆ ಸಫಾರಿ ನಡೆಸಿದ ಪ್ರಧಾನಿ, ಬಂಡೀಪುರ ಕ್ಯಾಂಪ್​ನ ವನ್ಯಜೀವಿ, ಅರಣ್ಯ ಸಂಪತ್ತನ್ನು ವೀಕ್ಷಿಸಿದರು. ಚುನಾವಣೆ ಘೋಷಣೆಯಾದ ಬಳಿಕ ಮೊದಲ ಬಾರಿಗೆ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಹುಲಿ ಸಂರಕ್ಷಣೆ ಯೋಜನೆಯ ಸುವರ್ಣ ವರ್ಷಾಚರಣೆ ಅಂಗವಾಗಿ ಪ್ರಧಾನಿ ಅಭಯಾರಣ್ಯಕ್ಕೆ ಭೇಟಿ ನೀಡಿದ್ದರು.

ಇದನ್ನೂ ಓದಿ :ಬಂಡೀಪುರ ಕಾಡಲ್ಲಿ ಒಂದೂವರೆ ತಾಸು ಪ್ರಧಾನಿ ಸಫಾರಿ

ಇನ್ನು ಮೈಸೂರಿನ ಕರಾಮುವಿ ಘಟಿಕೋತ್ಸವ ಭವನದಲ್ಲಿ ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ವೇಳೆ 2022ರ ಹುಲಿ ಗಣತಿ ವರದಿಯನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಿದರು. ಈ ವರದಿಯಂತೆ ದೇಶದಲ್ಲಿ ಹುಲಿಗಳ ಸಂಖ್ಯೆ ಹೆಚ್ಚಾಗಿರುವುದು ಕಂಡು ಬಂದಿದೆ. 2022 ರಲ್ಲಿ ದೇಶದಲ್ಲಿ 3,167 ಹುಲಿಗಳಿವೆ. 2006 ರಲ್ಲಿ 1,411, 2010 ರಲ್ಲಿ 1706, 2014 ರಲ್ಲಿ 2226, 2018 ರಲ್ಲಿ 2967 ಹುಲಿಗಳ ಇದ್ದವು. ಕಳೆದ 10 ವರ್ಷಗಳಲ್ಲಿ ಹುಲಿಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ ಎಂಬುದನ್ನು ವರಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ :ಗೋಭಕ್ತಿ ಎಂದರೆ ಗೋಮಾಂಸ ಮಾರಾಟಕ್ಕೆ ಲೈಸೆನ್ಸ್ ಕೊಡುವುದೇ ಮೋದಿ ಜೀ?: ಸಿದ್ದರಾಮಯ್ಯ ಪ್ರಶ್ನೆ

ABOUT THE AUTHOR

...view details