ಕರ್ನಾಟಕ

karnataka

By

Published : Jul 31, 2020, 10:20 PM IST

ETV Bharat / state

ಬಕ್ರೀದ್ ಹಬ್ಬಕ್ಕೆ ಶುಭಾಶಯ ಕೋರಿದ ಹೆಚ್​ಡಿಡಿ-ಹೆಚ್​​ಡಿಕೆ..

ಈ ಹಬ್ಬ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆ ಹೆಚ್ಚಿಸಲಿ ಎಂದು ಹಾರೈಸುತ್ತೇನೆ ಹಾಗೂ ವಿಪತ್ತಿನ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಕ್ರೀದ್ ಹಬ್ಬವನ್ನು ಆಚರಿಸಬೇಕೆಂದು ದೇವೇಗೌಡರು ವಿನಂತಿಸಿದ್ದಾರೆ..

HDD and  HDK greeting the Bakreid festival
ಬಕ್ರೀದ್ ಹಬ್ಬಕ್ಕೆ ಶುಭಾಶಯ

ಬೆಂಗಳೂರು :ಮುಸ್ಲಿಂ ಬಾಂಧವರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಬಕ್ರೀದ್ ಹಬ್ಬದ ಶುಭಾಶಯ ಕೋರಿದ್ದಾರೆ. ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವು ಸೌಹಾರ್ದತೆ ಮೂಡಿಸಲಿ ಎಂದಿದ್ದಾರೆ.

ಈ ಕುರಿತ ಟ್ವೀಟ್ ಮಾಡಿರುವ ಅವರು, ತ್ಯಾಗ ಬಲಿದಾನದ ಜೊತೆಗೆ ವಿಶ್ವ ಭ್ರಾತೃತ್ವವನ್ನು ಸಾರುವ ಪವಿತ್ರ ಹಬ್ಬವು ನಾಡಿನಲ್ಲಿ ಸ್ನೇಹ-ಸೌಹಾರ್ದತೆ ಬೆಳೆಸಲು ಪ್ರೇರಣೆ ನೀಡಲಿ ಎಂದು ಶುಭ ಕೋರಿದ್ದಾರೆ.

ಮುಸ್ಲಿಂ ಬಾಂಧವರಿಗೆ ಪ್ರೀತಿ, ಭ್ರಾತೃತ್ವ ಹಾಗೂ ಮಾನವೀಯ ಸೇವೆಯ ಸಂಕೇತವಾದ ಬಕ್ರೀದ್ ಹಬ್ಬದ ಶುಭಾಶಯಗಳು. ಈ ಹಬ್ಬ ಸಮಾಜದಲ್ಲಿ ಶಾಂತಿ ಹಾಗೂ ಸೌಹಾರ್ದತೆಯನ್ನು ಹೆಚ್ಚಿಸಲಿ ಎಂದು ಹಾರೈಸುತ್ತೇನೆ ಹಾಗೂ ವಿಪತ್ತಿನ ಈ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಬಕ್ರೀದ್ ಹಬ್ಬವನ್ನು ಆಚರಿಸಬೇಕೆಂದು ದೇವೇಗೌಡರು ವಿನಂತಿಸಿದ್ದಾರೆ.

ಇನ್ನು, ಕೊರೊನಾ ಸವಾಲಿನ ನಡುವೆ ಬದುಕುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಎಲ್ಲರೂ ಕೂಡ ಜವಾಬ್ದಾರಿಯಿಂದ ವರ್ತಿಸೋಣ. ಬಕ್ರೀದ್ ಹಬ್ಬ ಶಾಂತಿ, ನೆಮ್ಮದಿ ಹಾಗೂ ಸಮೃದ್ಧಿ ತರಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ABOUT THE AUTHOR

...view details