ಕರ್ನಾಟಕ

karnataka

By

Published : May 18, 2022, 3:16 PM IST

ETV Bharat / state

ಹೆಚ್​ಡಿಡಿ ಹುಟ್ಟುಹಬ್ಬ: ಅಪ್ಪಾಜಿ ಕ್ಯಾಂಟೀನ್​ನಲ್ಲಿ ಜನರಿಗೆ ಊಟ ಬಡಿಸಿದ ನಿಖಿಲ್ ಕುಮಾರಸ್ವಾಮಿ

ಇಂದು ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ 90ನೇ ವರ್ಷದ ಹುಟ್ಟುಹಬ್ಬ. ಈ ಹಿನ್ನೆಲೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹನುಮಂತನಗರದಲ್ಲಿರುವ ಅಪ್ಪಾಜಿ ಕ್ಯಾಂಟೀನ್​​ಗೆ ಭೇಟಿ ನೀಡಿ, ಗ್ರಾಹಕರಿಗೆ ಊಟ ಬಡಿಸಿದರು.

Birthday of former Prime Minister HD Deve Gowda
ಅಪ್ಪಾಜಿ ಕ್ಯಾಂಟೀನ್​ನಲ್ಲಿ ಜನರಿಗೆ ಊಟ ಬಡಿಸಿದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಬೆಂಗಳೂರಿನ ಹನುಮಂತನಗರದಲ್ಲಿರುವ ಅಪ್ಪಾಜಿ ಕ್ಯಾಂಟೀನ್​​ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿದರು. ಅಲ್ಲಿ ಅವರು ಕ್ಯಾಂಟೀನ್‌ಗೆ ಬಂದ ಗ್ರಾಹಕರಿಗೆ ಊಟ ಬಡಿಸಿದರು. ಅಷ್ಟೇ ಅಲ್ಲದೇ ಕ್ಯಾಂಟೀನ್​​ನಲ್ಲಿ ಕೇಕ್ ಕತ್ತರಿಸಿ ದೇವೇಗೌಡರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಅಪ್ಪಾಜಿ ಕ್ಯಾಂಟೀನ್​ನಲ್ಲಿ ಜನರಿಗೆ ಊಟ ಬಡಿಸಿದ ನಿಖಿಲ್ ಕುಮಾರಸ್ವಾಮಿ

ಮಧ್ಯಾಹ್ನದ ಭೋಜನವಾಗಿ ರಾಗಿಮುದ್ದೆಯನ್ನು ಅಪ್ಪಾಜಿ ಕ್ಯಾಂಟೀನ್​ನಲ್ಲಿಯೇ ನಿಖಿಲ್ ಸವಿದರು. ಬಳಿಕ ಕ್ಯಾಂಟೀನ್ ಸಿಬ್ಬಂದಿ ಜೊತೆ ಕೆಲಹೊತ್ತು ನಿಖಿಲ್ ಕುಮಾರಸ್ವಾಮಿ ಕಾಲ ಕಳೆದರು. ದೇವೇಗೌಡರ ವಿಚಾರಗಳನ್ನು ಅರ್ಥ ಮಾಡಿಕೊಂಡು, ಕಳೆದ 5 ವರ್ಷಗಳಿಂದ ಬೆಂಗಳೂರಿನಲ್ಲಿ ಕಡಿಮೆ ಹಣಕ್ಕೆ ಊಟ ವಿತರಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಆಟೋ ಚಾಲಕರು, ಕಾರ್ಮಿಕರು ಬದುಕು ಸಾಗಿಸುವುದೇ ಕಷ್ಟವಾಗಿದೆ. ಇದನ್ನು ಗಮನದಟ್ಟು ಮಾಡಿಕೊಂಡು 10 ರೂಪಾಯಿಗೆ ರಾಜ್ಯ ಜೆಡಿಎಸ್ ವಕ್ತಾರ ಟಿ.ಎ. ಶರವಣ ಅವರು ಅನ್ನದಾಸೋಹ ನಡೆಸುತ್ತಿದ್ದಾರೆ. ಇದು ಹೀಗೆಯೇ ನಿರಂತರವಾಗಿ ಮುಂದುವರೆಯಲಿ ಎಂದು ಹಾರೈಸಿದರು.

ತಾತನಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ನಿಖಿಲ್​​

ಈ ವೇಳೆ ವಿಧಾನಪರಿಷತ್ ಮಾಜಿ ಸದಸ್ಯರು ಹಾಗೂ ರಾಜ್ಯ ಜೆಡಿಎಸ್ ವಕ್ತಾರರಾದ ಟಿ.ಎ. ಶರವಣ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಹಾಜರಿದ್ದರು. ಇಂದು ಮಾಜಿ ಪ್ರಧಾನಿ ದೇವೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಅಪ್ಪಾಜಿ ಕ್ಯಾಂಟೀನ್​ನಲ್ಲಿ 1 ರೂಪಾಯಿಗೆ ಊಟ ವಿತರಿಸಲಾಯಿತು. ಇದಕ್ಕೂ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ಗೌಡರ ನಿವಾಸಕ್ಕೆ ತೆರಳಿ ತಾತ ದೇವೇಗೌಡರಿಗೆ ಸಿಹಿ ತಿನ್ನಿಸಿ ಹುಟ್ಟುಹಬ್ಬದ ಶುಭಾಶಯ ಕೋರಿದರು.

ಇದನ್ನೂ ಓದಿ:ದೇವೇಗೌಡರಿಗೆ ಜನ್ಮದಿನದ ಶುಭ ಕೋರಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್​ವೈ

For All Latest Updates

TAGGED:

ABOUT THE AUTHOR

...view details