ಕರ್ನಾಟಕ

karnataka

By

Published : May 11, 2020, 12:45 PM IST

ETV Bharat / state

ಪ್ರಧಾನಿ ಬಳಿ ಕೋವಿಡ್-19 ಪ್ಯಾಕೇಜ್​ಗೆ ಆಗ್ರಹಿಸಿ.. ಸಿಎಂಗೆ ಸಲಹೆ ನೀಡಿದ ಹೆಚ್​ಡಿಕೆ

ಕಳೆದ 3 ದಿನಗಳ ಅಂಕಿಅಂಶ ಗಮನಿಸಿದರೆ ರಾಜ್ಯದಲ್ಲಿ ಕೋವಿಡ್ ಹೆಚ್ಚುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ವೈದ್ಯಕೀಯ ಕ್ರಮಗಳನ್ನು ಬಿಗಿಗೊಳಿಸಬೇಕಿದೆ. ಜೊತೆಗೆ ನಷ್ಟಕ್ಕೊಳಗಾಗಿರುವ ಜನರಿಗೆ ಆರ್ಥಿಕ ಪರಿಹಾರ ನೀಡಬೇಕಿದೆ.

HDK
ಹೆಚ್​ಡಿಕೆ

ಬೆಂಗಳೂರು :ಕೊರೊನಾ ವೈರಸ್ ನಿಯಂತ್ರಣ, ಲಾಕ್​ಡೌನ್ ಕುರಿತಂತೆ ಇಂದು ಪ್ರಧಾನಿ ಅವರು ವಿವಿಧ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಲಿದ್ದಾರೆ. ಇದರಲ್ಲಿ ರಾಜ್ಯದ ಸಿಎಂ ಯಡಿಯೂರಪ್ಪ ಕೂಡ ಇರಲಿದ್ದಾರೆ. ಈ ಸಭೆಯಲ್ಲಿ ಯಡಿಯೂರಪ್ಪ ರಾಜ್ಯಕ್ಕೆ 'ಕೋವಿಡ್-19 ಪ್ಯಾಕೇಜ್' ನೀಡುವಂತೆ ಮೋದಿ ಅವರನ್ನು ಆಗ್ರಹಿಸಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ 3 ದಿನಗಳ ಅಂಕಿಅಂಶ ಗಮನಿಸಿದರೆ ರಾಜ್ಯದಲ್ಲಿ ಕೋವಿಡ್-19 ಹೆಚ್ಚುತ್ತಿರುವಂತೆ ಕಾಣುತ್ತಿದೆ. ಹೀಗಾಗಿ ವೈದ್ಯಕೀಯ ಕ್ರಮಗಳನ್ನು ಬಿಗಿಗೊಳಿಸಬೇಕಿದೆ. ಜೊತೆಗೆ ನಷ್ಟಕ್ಕೊಳಗಾಗಿರುವ ಜನರಿಗೆ ಆರ್ಥಿಕ ಪರಿಹಾರ ನೀಡಬೇಕಿದೆ. ದೊಡ್ಡ ಮಟ್ಟದ ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ ಕೊಡುವ ಕರ್ನಾಟಕದಂತಹ ದೊಡ್ಡ ರಾಜ್ಯಕ್ಕೆ ಸೂಕ್ತ ಪ್ಯಾಕೇಜ್ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

'ಕೋವಿಡ್-19 ಪ್ಯಾಕೇಜ್' ಜೊತೆಗೆ ಜಿಎಸ್​ಟಿ ಬಾಕಿ, ನೆರೆ-ಬರ ಪರಿಹಾರ ಸೇರಿದಂತೆ ಕೇಂದ್ರದಿಂದ ಬರಬೇಕಾದ ಇತರ ಬಾಕಿ ಹಣದ ಬಗ್ಗೆಯೂ ಬಿಎಸ್‌ವೈ ಮೋದಿ ಜೊತೆಗಿನ ಸಭೆಯಲ್ಲಿ ಕೇಳಬೇಕು. ಲಾಕ್​ಡೌನ್​ನಿಂದಾಗಿ ರಾಜ್ಯ ಹಣಕಾಸಿನ ತೊಂದರೆ ಅನುಭವಿಸುತ್ತಿದೆ. ಈ ಹೊತ್ತಲ್ಲಿ ಕೇಂದ್ರದಿಂದ ಸೂಕ್ತ ನೆರವು ಬಾರದ ಹೊರತು ಕೋವಿಡ್-19 ನಿಯಂತ್ರಣ ಕಷ್ಟವಾಗಲಿದೆ ಎಂದಿದ್ದಾರೆ.

ABOUT THE AUTHOR

...view details